ಟಿಪ್ಪರ್, ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ಸವಾರ ಇಚ್ಲಂಪಾಡಿಯ ಯುವಕ ದಾರುಣ ಸಾವು
ಮಂಗಳೂರಿನ ಪಂಪ್ ವೆಲ್ ನಲ್ಲಿ ಜೂ. 14ರಂದು ಬೆಳಿಗ್ಗೆ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಇಚ್ಲಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್ (25ವ.) ಮೃತಪಟ್ಟ ಘಟನೆ ವರದಿಯಾಗಿದೆ.
ಬೆಂದೂರ್ ವೆಲ್ ನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಸಂದೇಶ್ ರಾತ್ರಿ ಪಾಳಿಯ ಕೆಲಸ ಮುಗಿಸಿ ತನ್ನ ಸ್ಕೂಟಿಯಲ್ಲಿ ರೂಮ್ ಗೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ತಂದೆ ತಾಯಿ ಮೃತರು ಇಬ್ಬರು ಸಹೋದರರನ್ನು ಅಗಲಿದ್ದಾರೆ