ಕರಾವಳಿಕ್ರೈಂ

ಪುತ್ತೂರು: ಮೆಸ್ಕಾಂ ಎಇಇ. ಯವರಿಗೆ ಗುತ್ತಿಗೆದಾರನಿಂದ ಬೆದರಿಕೆ-ಪ್ರಕರಣ ದಾಖಲು

ಪುತ್ತೂರು: ವಿದ್ಯುತ್ ಗುತ್ತಿಗೆದಾರನೊಬ್ಬ ಬನ್ನೂರು ಮೆಸ್ಕಾಂ ಉಪವಿಭಾಗ ಕಚೇರಿಗೆ ತೆರಳಿ ಮೆಸ್ಕಾಂ ಎಇಇ ಅವರಿಗೆ ಬೆದರಿಕೆ ಒಡ್ಡಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿರುವ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೃಷಿ ನೀರಾವರಿ ಪಂಪ್ ಸೆಟ್ ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದಕ್ಕೆ ಬೆದರಿಕೆ ಒಡ್ಡಲಾಗಿದೆ ಎಂದು ತಿಳಿದು ಬಂದಿದೆ.

ಮಹಮ್ಮದ್ ನಿಸಾರ್ ಬೆದರಿಕೆ ಒಡ್ಡಿದ ಆರೋಪಿ. ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ (ಎಇಇ) ರಾಮಚಂದ್ರ ದೂರು ನೀಡಿದವರು.
ಜೂ.14ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಹಮ್ಮದ್ ನಿಸಾರ್ ಕಚೇರಿಗೆ ಆಗಮಿಸಿ ಮುಂಡೂರು ಗ್ರಾಮದ ರಮೇಶ್ ಅವರ ಕೃಷಿ ನೀರಾವರಿ ಪಂಪ್ ಸೆಟ್ ಗೆ ನೀಡಿದ ಅರ್ಜಿಯನ್ನು ತಿರಸ್ಕಾರ ಮಾಡಿದ್ದೇಕೆ ಎಂದು ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಇಲಾಖೆಯ ನಿಯಮದ ಅನುಸಾರ ಅರ್ಜಿಯನ್ನು ತಿರಸ್ಕಾರ ಮಾಡಲಾಗಿತ್ತು. ಅದ್ಯಾಗೂ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆರೋಪಿ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!