ಕ್ರೈಂರಾಜ್ಯ

ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ ತಂದೆ

ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ತಂದೆಯೊಬ್ಬ ಬಾವಿಗೆ ಹಾರಿದ್ದು ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಗಡಿಗ್ರಾಮ ಕುಂಚಾವರಂ ಬಳಿ ಜೂ.18ರಂದು ನಡೆದಿದೆ.
ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ ವಡ್ಡರ್ (41. ವ) ಪುತ್ರ ಓಂಕಾರ(9. ವ ) ಹಾಗೂ ಪುತ್ರಿ ಅಕ್ಷರಾ (7. ವ) ಮೃತ ದುರ್ದೈವಿಗಳು.

ಇತ್ತೀಚೆಗೆ ಹೈದರಾಬಾದ್‌ ಗೆ ತೆರಳಿದ್ದ ಹಣಮಂತ ಮಕ್ಕಳೊಂದಿಗೆ ಕುಂಚಾವರಂಗೆ ಬಂದಿದ್ದರು. ತನ್ನ ಸಹೋದರನಿಗೆ ಕರೆ ಮಾಡಿ, ನಾನು ಮಕ್ಕಳೊಂದಿಗೆ ಬಾವಿದ್ದು ಬಿದ್ದು ಸಾಯುತ್ತಿದ್ದೇನೆ. ನನ್ನ ಶವ ತೆಗೆದು ಅಂತ್ಯಕ್ರಿಯೆ ನಡೆಸುವಂತೆ ವಿನಂತಿಸಿ ಕರೆ ಕಡಿತಗೊಳಿಸಿದ್ದ. ಸಹೋದರ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಕುಂಚಾವರಂ ಬಳಿಯ ಪೋಚಾವರಂ ಗ್ರಾಮದ ತೋಟದ ಬಾವಿಯಲ್ಲಿ ಮೂವರ ಶವ ಪತ್ತೆಯಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕುಂಚಾವರಂ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಶವ ಹೊರ ತೆಗೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!