ರಾಜ್ಯ

ದುಷ್ಕರ್ಮಿಗಳಿಂದ ಕೊಲೆಗೀಡಾದವರ ಕುಟುಂಬಗಳಿಗೆ
ಮುಖ್ಯಮಂತ್ರಿಯಿಂದ ತಲಾ 25 ಲಕ್ಷ ರೂ ಪರಿಹಾರ ವಿತರಣೆ

ಪುತ್ತೂರು: ವಿವಿಧ ಸಂದರ್ಭಗಳಲ್ಲಿ ಜಿಲ್ಲೆಯಲ್ಲಿ ದುಷ್ಕರ್ಮಿಗಳಿಂದ ಕೊಲೆಗೀಡಾದ ನಾಲ್ವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಪರಿಹಾರದ ಚೆಕ್ ವಿತರಣೆ ಮಾಡಿದರು.

ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು. ನಾಲ್ವರ ಕುಟುಂಬಗಳಿಗೂ ತಲಾ 25 ಲಕ್ಷದಂತೆ ಪರಿಹಾರ ನೀಡಲಾಯಿತು. ದೀಪಕ್ ರಾವ್, ಜಲೀಲ್, ಪಾಝಿಲ್ ಮತ್ತು ಮಸೂದ್ ಕುಟುಂಬಗಳಿಗೆ ಪರಿಹಾರ ವಿತರಣೆ ಮಾಡಲಾಯಿತು. ಕುಟುಂಬದ ಸದಸ್ಯರು ಚೆಕ್ ಪಡೆದುಕೊಂಡರು.

ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ಈ ನಾಲ್ಕು ಕುಟುಂಬಗಳಿಗೆ ಪರಿಹಾರ ನೀಡಿರದ ಕಾರಣ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಅವರ ಬಳಿ ನಿಯೋಗ ತೆರಳಿ ಪರಿಹಾರ ನೀಡುವಲ್ಲಿ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ತಾರತಮ್ಯ ಮಾಡಿದ್ದು ಪರಿಹಾರ ನೀಡುವಂತೆ ಮನವಿ ಮಾಡಿದ್ದರು.
ಈ ಸಂದರ್ಭದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಸೇರಿದಂತೆ ಪಕ್ಷದ ಪ್ರಮುಖರು, ಸಚಿವರುಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!