ಕರಾವಳಿಕ್ರೈಂ

ಕಡಬ: ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ



ಕಡಬ:ವ್ಯಕ್ತಿಯೊಬ್ಬರು ತಾಲೂಕಿನ ಕೋಡಿಂಬಾಳ ಗ್ರಾಮದ ದಂಡುಗುರಿ ಸಮೀಪ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.24 ರಂದು ವರದಿಯಾಗಿದೆ. ಸಕಲೇಶಪುರ ಮೂಲದ ನಿವಾಸಿ ಧರ್ಮಯ್ಯ (40.ವ) ಆತ್ಮಹತ್ಯೆ ಮಾಡಿಕೊಂಡವರು.

ಮೂಲತ: ಹಾಸನ ಜಿಲ್ಲೆಯ ಸಕಲೇಶಪುರ ಬಾಲಗದ್ದೆ ನಿವಾಸಿಯಾದ ಧರ್ಮಯ್ಯ ಅವರು ಕಡಬದ ಕೋಡಿಂಬಾಳ ಬಳಿ ರಬ್ಬರ್ ಕಟ್ಟಿಂಗ್ ಕೆಲಸಕ್ಕೆಂದು ಬಂದಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕಡಬ ಪೊಲೀಸರು, ಸ್ಥಳೀಯರು ಹಾಗೂ ಶೌರ್ಯ ತಂಡದ ಸದಸ್ಯರು ನದಿಗಿಳಿದು ಕಾರ್ಯಚರಣೆ ನಡೆಸಿ ಮೃತದೇಹ ಪತ್ತೆ ಹಚ್ಚಿದ್ದಾರೆ. ಕುಮಾರಧಾರ ನದಿ ಬಳಿ ವ್ಯಕ್ತಿಯೊಬ್ಬರ ಶೂ ಪತ್ತೆಯಾದ ಹಿನ್ನಲೆ ಅನುಮಾನಗೊಂಡು ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!