ಕರಾವಳಿ

ಕನ್ಯಾಡಿ ದಿನೇಶ್ ನಾಯ್ಕ್ ಕುಟುಂಬಕ್ಕೂ ಪರಿಹಾರ ನೀಡುವಂತೆ ರಕ್ಷಿತ್ ಶಿವರಾಂರಿಂದ ಸಿಎಂ ಸಿದ್ದರಾಮಯ್ಯರಿಗೆ ಮನವಿ



ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಕನ್ಯಾಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಹತ್ಯೆಯಾಗಿರುವ ದಿನೇಶ್ ನಾಯ್ಕ್ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದಾಗಿ ತಿಳಿದು ಬಂದಿದೆ.

ಮೃತ ದಿನೇಶ್ ನಾಯ್ಕ್ ಅವರ ಕುಟುಂಬದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಪುತ್ರನಿದ್ದು ಕುಟುಂಬ ತೀರಾ ಬಡತನದಿಂದ ದಿನ ದೂಡುತ್ತಿದ್ದಾರೆ. ಕೋಮು ವೈಷಮ್ಯಕ್ಕೆ ಬಲಿಯಾದವರ ಕುಟುಂಬಗಳಿಗೆ ಸರಕಾರದ ವತಿಯಿಂದ 25 ಲಕ್ಷ ರೂ ಸಹಾಯಧನ ನೀಡಿರುವುದಲ್ಲದೇ ಕುಟುಂಬದ ಓರ್ವ ವ್ಯಕ್ತಿಗೆ ಸರಕಾರಿ ಉದ್ಯೋಗ ನೀಡುವ ಘೋಷಣೆ ಮಾಡಿದ್ದೀರಿ. ಇದೇ ರೀತಿ ದಿನೇಶ್ ನಾಯ್ಕ್‌ರವರ ಕುಟುಂಬಕ್ಕೂ ಪರಿಹಾರ ನೀಡಬೇಕೆಂದು ರಕ್ಷಿತ್ ಶಿವರಾಂ ಪತ್ರದ ಮೂಲಕ ಸಿದ್ದರಾಮಯ್ಯರನ್ನು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!