ವಿಪಕ್ಷ ನಾಯಕನಿಲ್ಲದೆ ಅಧಿವೇಶನ ನಡೆಯುತ್ತಿರುವುದು ದುರ್ದೈವ: ಹೆಚ್.ಕೆ.ಪಾಟೀಲ್
ರಾಜ್ಯದ ಇತಿಹಾಸದಲ್ಲಿ ವಿಪಕ್ಷ ನಾಯಕನಿಲ್ಲದೆ ಮೊದಲ ಅಧಿವೇಶನ ನಡೆಯುತ್ತಿದ್ದು, ಇದು ದುರ್ದೈವ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸದನದಲ್ಲಿ ಯಾವಾಗಲೂ ವಿಪಕ್ಷ ನಾಯಕರು ಇದ್ದೇ ಇರುತ್ತಿದ್ದರು. ವಿರೋಧ ಪಕ್ಷದ ನಾಯಕನಿಲ್ಲದೇ ರಾಜ್ಯಪಾಲರ ಭಾಷಣ ಮಾಡಿದ್ದಾರೆ. ಇದು ಆರೋಗ್ಯಕರ ಬೆಳವಣಿಗೆ ಅಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.