ಕರಾವಳಿಕ್ರೈಂರಾಜ್ಯ

ಅಜಿತ್ ರೈ ಸೊರಕೆಗೆ ನ್ಯಾಯಾಂಗ ಬಂಧನ



ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಕೆಆರ್ ಪುರಂ ತಹಸಿಲ್ದಾರ್ ಪುತ್ತೂರು ತಾಲೂಕು ಸೊರಕೆಯ ಅಜಿತ್ ಕುಮಾರ್ ರೈ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಅವಧಿಗೆ ಲೋಕಾಯುಕ್ತ ಪೊಲೀಸರ ಕಷ್ಟಡಿಗೆ ನೀಡಲಾಗಿತ್ತು. ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಆರೋಪಿಯನ್ನು ಮತ್ತೆ ಕಷ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ಅಜಿತ್ ಕುಮಾರ್ ರೈ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ವಾದ-ಪ್ರತಿವಾದ ಆಲಿಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯ ಅಜಿತ್ ಕುಮಾರ್ ರೈ ಅವರನ್ನು ನ್ಯಾಯಾಂಗ ಬಂಧನದಲ್ಲಿರಿಸಲು ಆದೇಶಿಸಿದೆ.

Leave a Reply

Your email address will not be published. Required fields are marked *

error: Content is protected !!