ಕರಾವಳಿರಾಜಕೀಯರಾಜ್ಯ

‘ಆರೆಡ ಪನ್ಲೆ ಅಣ್ಣಾ’… ಸ್ಪೀಕರ್ ಖಾದರ್ ತುಳುವಿನಲ್ಲಿ ಹೇಳಿದ್ದು ಯಾರಲ್ಲಿ..?



ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಎಂ.ಬಿ.ಪಾಟೀಲ್ ನಡುವೆ ಜಟಾಪಟಿ ನಡೆಯುತ್ತಿದ್ದಾಗ ಸ್ಪೀಕರ್ ಯು‌.ಟಿ.ಖಾದರ್ ತುಳು ಭಾಷೆಯಲ್ಲಿ ಮಾತನಾಡಿದ ಘಟನೆ ನಡೆದಿದ್ದು ಅದೀಗ ಭಾರೀ ವೈರಲ್ ಆಗಿದೆ.

ಯತ್ನಾಳ್ ಮತ್ತು ಸಚಿವ ಎಂ.ಬಿ.ಪಾಟೀಲ್ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದಾಗ ಸ್ಪೀಕರ್ ಕುಳಿತುಕೊಳ್ಳುವಂತೆ ಜೋರು ದನಿಯಲ್ಲಿ ಗದರಿದ್ದಾರೆ. ಆದರೆ ಯತ್ನಾಳ್ ಮಾತು ಕೇಳದೇ ಇದ್ದಾಗ ಖಾದರ್ ಅಲ್ಲೆ ಹತ್ತಿರದಲ್ಲೇ ಇದ್ದ ಸುನಿಲ್ ಕುಮಾರ್ ಬಳಿ ಖಾದರ್ ‘ಅರೆಡಾ ಪನ್ಲೆ ಅಣ್ಣಾ.. (ಅವರಿಗೆ ಹೇಳಿ ಅಣ್ಣಾ) ಎಂದು ತುಳುವಿನಲ್ಲಿ ಹೇಳಿದ್ದಾರೆ.

ತುಳು ಭಾಷೆ ಅರ್ಥವಾಗದ ಯತ್ನಾಳ್ ‘ಮಂಗಳೂರು ಕನ್ನಡ ಸುಂದರ ಭಾಷೆ. ನಮ್ಮ ಕನ್ನಡ ಬೇರೆ ಹಾಗೂ ಮೈಸೂರು ಕನ್ನಡ ಬೇರೆ, ಹೈದರಾಬಾದ್ ಕನ್ನಡ ಮುಂಬೈ ಕನ್ನಡ ಬೇರೆ. ನಮಗೆ ನಿಮ್ಮ‌ ಕನ್ನಡ ಭಾಷೆ ಅರ್ಥ ಆಗಬೇಕು. ಅದಕ್ಕೆ ಒಂದು ಆಪ್ ಹಾಕಿಕೊಡಿ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!