ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಸಾವು
ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಸುಶೀಲ(6.ವ) ಸಾವನ್ನಪ್ಪಿದ್ದಾಳೆ.
![](http://newsbites.in/wp-content/uploads/2023/07/IMG_20230715_132706-1024x426.jpg)
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಸೋಲಿಗರ ಹಾಡಿಯಲ್ಲಿ ಬಾಲಕಿ ಮನೆಯಿಂದ ಹೊರಬಂದಿದ್ದ ವೇಳೆ ಚಿರತೆ ದಾಳಿ ಮಾಡಿ ಬಾಲಕಿಯನ್ನು ಎಳೆದೊಯ್ಯಲು ಯತ್ನಿಸಿತ್ತು. ಇದನ್ನ ನೋಡಿದ ಮನೆಯವರು ಕೂಗಿಕೊಳ್ಳುತ್ತಿದ್ದಂತೆ ಚಿರತೆ ಬಾಲಕಿಯನ್ನು ಬಿಟ್ಟು ಓಡಿತ್ತು. ಬಳಿಕ ಆಕೆಯನ್ನ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಇದೀಗ ಗಂಭೀರ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದು ಬಂದಿದೆ.