ಕರಾವಳಿರಾಜಕೀಯರಾಜ್ಯ

ಲೋಕಸಭಾ ಚುನಾವಣೆ: ಜೆಡಿಎಸ್ ಬೆಂಬಲ ಅಪೇಕ್ಷಿಸಿದ ಶೋಭಾ ಕರಂದ್ಲಾಜೆ

ರಾಜಕೀಯ ಭಿನ್ನಮತಗಳನ್ನ ದೂರವಿಟ್ಟು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಕೊಡಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ಸೂಚಿಸುವ ಬಗ್ಗೆ ಮಾತನಾಡಿದ ಅವರು, ಅನೇಕ ಪಕ್ಷಗಳು ಬೆಂಬಲಿಸುತ್ತಿದ್ದು, ಜೆಡಿಎಸ್ನಿಂದಲೂ ನಾವು ಅಪೇಕ್ಷೆ ಮಾಡುತ್ತೇವೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗಬೇಕು. ಇಂದು ಭಾರತಕ್ಕೆ ಎದ್ದುನಿಂತ್ತು ಗೌರವ ನೀಡುತ್ತಿದ್ದಾರೆ ಎಂದರೆ ಅದಕ್ಕೆ ಪ್ರಧಾನಿ ಮೋದಿ ಅವರೇ ಕಾರಣ. ಹೀಗಾಗಿ ರಾಜಕೀಯ ಭಿನ್ನಮತಗಳನ್ನ ದೂರ ಬಿಟ್ಟು ಬೆಂಬಲ ಕೊಡಬೇಕು. ಇಂತಹ ಅಪೇಕ್ಷೆ ಅನೇಕ ರಾಜಕೀಯ ಪಾರ್ಟಿಯಲ್ಲೂ ಇದೆ. ಈ ಅಪೇಕ್ಷೆಯನ್ನ ಜೆಡಿಎಸ್ನಿಂದಲೂ ನಿರೀಕ್ಷೆ ಮಾಡುತ್ತೇವೆ ಎಂದರು. ಶೋಭಾ ಕರಂದ್ಲಾಜೆ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Leave a Reply

Your email address will not be published. Required fields are marked *

error: Content is protected !!