ಕರಾವಳಿ

ಜು.23: ಲಯನ್ಸ್ ಕ್ಲಬ್ ಪುತ್ತೂರು-ಪಾಣಾಜೆ ಪದಗ್ರಹಣ ಸಮಾರಂಭ

ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು-ಪಾಣಾಜೆ ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸ್ಥಾಪಕರ ದಿನಾಚರಣೆ ಕಾರ್ಯಕ್ರಮ ಜು.23ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಸರಿಯಾಗಿ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ.

ಮಹಮ್ಮದ್ ಕುಕ್ಕುವಳ್ಳಿ

317ಡಿ ಜಿಲ್ಲೆ ದ್ವಿತೀಯ ಉಪ ಜಿಲ್ಲಾ ರಾಜ್ಯಪಾಲರಾದ ಲ|ಕುಡ್ಪಿ ಅರವಿಂದ ಶೆಣೈ ಪಿಎಂಜೆಎಫ್ ಅವರು ಪದಗ್ರಹಣ ನಡೆಸಿಕೊಡಲಿದ್ದು ಮಾಜಿ ಪ್ರಾಂತೀಯ ಅಧ್ಯಕ್ಷ ಲ|ಹೇಮನಾಥ ಶೆಟ್ಟಿ ಕಾವು ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಲ್ಲದೇ ರಾಜ್ಯ ಸಂಪನ್ಮೂಲ ವ್ಯಕ್ತಿ ಲ|ಇಕ್ಬಾಲ್ ಬಾಳಿಲರವರಿಂದ ಪ್ರೇರಣಾ ತರಬೇತಿ ಶಿಬಿರ ನಡೆಯಲಿದೆ. 

ದಯಾನಂದ ರೈ ಹಾಗೂ ಪ್ರಕಾಶ್ ರೈ

ಇರ್ದೆ, ಬೆಟ್ಟಂಪಾಡಿ, ನಿಡ್ಪಳ್ಳಿ, ಪಾಣಾಜೆ ಗ್ರಾಮದ 5 ಶಾಲೆಗಳ 15 ವಿದ್ಯಾರ್ಥಿಗಳಿಗೆ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಡಿದ ಸಾಧನೆಗಾಗಿ ವಿದ್ಯಾಕಿರಣ ಪ್ರಶಸ್ತಿ ನೀಡಲಾಗುವುದು ಎಂದು ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ ಇದರ ಅಧ್ಯಕ್ಷ ಲ| ಮಹಮ್ಮದ್ ಕುಕ್ಕುವಳ್ಳಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!