ಜು.23: ಲಯನ್ಸ್ ಕ್ಲಬ್ ಪುತ್ತೂರು-ಪಾಣಾಜೆ ಪದಗ್ರಹಣ ಸಮಾರಂಭ
ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು-ಪಾಣಾಜೆ ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸ್ಥಾಪಕರ ದಿನಾಚರಣೆ ಕಾರ್ಯಕ್ರಮ ಜು.23ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಸರಿಯಾಗಿ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ.

317ಡಿ ಜಿಲ್ಲೆ ದ್ವಿತೀಯ ಉಪ ಜಿಲ್ಲಾ ರಾಜ್ಯಪಾಲರಾದ ಲ|ಕುಡ್ಪಿ ಅರವಿಂದ ಶೆಣೈ ಪಿಎಂಜೆಎಫ್ ಅವರು ಪದಗ್ರಹಣ ನಡೆಸಿಕೊಡಲಿದ್ದು ಮಾಜಿ ಪ್ರಾಂತೀಯ ಅಧ್ಯಕ್ಷ ಲ|ಹೇಮನಾಥ ಶೆಟ್ಟಿ ಕಾವು ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅಲ್ಲದೇ ರಾಜ್ಯ ಸಂಪನ್ಮೂಲ ವ್ಯಕ್ತಿ ಲ|ಇಕ್ಬಾಲ್ ಬಾಳಿಲರವರಿಂದ ಪ್ರೇರಣಾ ತರಬೇತಿ ಶಿಬಿರ ನಡೆಯಲಿದೆ.

ಇರ್ದೆ, ಬೆಟ್ಟಂಪಾಡಿ, ನಿಡ್ಪಳ್ಳಿ, ಪಾಣಾಜೆ ಗ್ರಾಮದ 5 ಶಾಲೆಗಳ 15 ವಿದ್ಯಾರ್ಥಿಗಳಿಗೆ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಡಿದ ಸಾಧನೆಗಾಗಿ ವಿದ್ಯಾಕಿರಣ ಪ್ರಶಸ್ತಿ ನೀಡಲಾಗುವುದು ಎಂದು ಲಯನ್ಸ್ ಕ್ಲಬ್ ಪುತ್ತೂರು ಪಾಣಾಜೆ ಇದರ ಅಧ್ಯಕ್ಷ ಲ| ಮಹಮ್ಮದ್ ಕುಕ್ಕುವಳ್ಳಿ ತಿಳಿಸಿದ್ದಾರೆ.