ಬಾಳೆಹೊನ್ನೂರು-ಕಳಸ ಮಾರ್ಗ ಮಧ್ಯೆ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ
ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆ ಬಾಳೆಹೊನ್ನೂರು-ಕಳಸ ಮಾರ್ಗ ಮಧ್ಯೆ ತೆಪ್ಪದಗಂಡಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಭಾರೀ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಸಂಚಾರ ಸ್ಥಗಿತಗೊಂಡಿತ್ತು.
ಈ ವೇಳೆ ಸ್ಥಳೀಯರು ಹಾಗೂ ಯಾತ್ರಿಕರ ಪರಿಶ್ರಮದಲ್ಲಿ ತೆರವು ಕಾರ್ಯಾಚಾರಣೆ ನಡೆಸಿ ಕ್ರೇನ್ ಮುಖಾಂತರ ರಸ್ತೆಗೆ ಬಿದ್ದ ಎರಡು ಮರಗಳನ್ನು ತೆರವುಗೊಳಿಸಿದರು.ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ಕಂಬಗಳು ನೆಲಕ್ಕುರುಳಿತ್ತು. ಮೆಸ್ಕಾಂ ನ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ವರದಿ: ರಮೀಝ್ ಬಾಳೆಹೊನ್ನೂರು