ತುಂಬಿ ಹರಿಯುತ್ತಿರುವ ಸೇತುವೆಯಲ್ಲೇ ಪಿಕಪ್ ಚಾಲನೆ- ಸೇತುವೆ ಮಧ್ಯೆ ಸಿಲುಕಿಕೊಂಡ ಪಿಕಪ್
ಪುತ್ತೂರು: ಭಾರೀ ಮಳೆಯಿಂದಾಗಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ನೀರಿನ ಮಟ್ಟ ಏರಿಕೆಯಾಗಿದ್ದರೂ ಪಿಕಪ್ ಚಾಲಕ ತಮ್ಮ ವಾಹನವನ್ನು ಚಲಾಯಿಸಿದ ಪರಿಣಾಮ ಸೇತುವೆಯ ಮಧ್ಯ ಭಾಗದಲ್ಲಿ ಪಿಕಪ್ ಸಿಲುಕಿಕೊಂಡ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೆದಿಲದಲ್ಲಿ ನಡೆದಿದೆ.

ಕೆದಿಲ ಕಾಂತುಕೋಡಿ ಮುಳುಗು ಸೇತುವೆಯಲ್ಲಿ ಚಾಲಕ ಪಿಕಪ್ ಚಲಾಯಿಸಿ ನಡು ನೀರಿನಲ್ಲಿ ಸಿಲುಕಿಕೊಂಡಿದ್ದಾನೆ. ಕೂಡಲೇ ಎಚ್ಚೆತ್ತ ಸ್ಥಳೀಯರು ವಾಹನದಲ್ಲಿದ್ದವರ ರಕ್ಷಣೆ ಮಾಡಿದ್ದಾರೆ