ಕರಾವಳಿ

ನರಿಮೊಗರು ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರ ಹಾಗೂ ಪಶು ಚಿಕಿತ್ಸಾಲಯ ತೆರೆಯಲು ವೇದನಾಥ ಸುವರ್ಣ ಆಗ್ರಹ



ಪುತ್ತೂರು: ನರಿಮೊಗರು ಗ್ರಾ.ಪಂ ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರ ತೆರೆಯಬೇಕೆಂದು ಕಾಂಗ್ರೆಸ್ ಮುಖಂಡ ವೇದನಾಥ ಸುವರ್ಣ ಆಗ್ರಹಿಸಿದ್ದಾರೆ. 

ಜು.27ರಂದು ನಡೆದ ನರಿಮೊಗರು ಗ್ರಾ.ಪಂ ಗ್ರಾಮ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು ನಮ್ಮ ಹಲವು ವರ್ಷಗಳ ಬೇಡಿಕೆಗಳಲ್ಲೊಂದಾಗಿರುವ ಆರೋಗ್ಯ ಕೇಂದ್ರವನ್ನು ನರಿಮೊಗರು ವ್ಯಾಪ್ತಿಯಲ್ಲಿ ತೆರೆಯಬೇಕು. ನಮ್ಮ ಈ ವರೆಗಿನ ಬೇಡಿಕೆಗೆ ಸ್ಪಂದನೆ ಸಿಕ್ಕಿಲ್ಲ, ಮುಂದಕ್ಕೆ ನರಿಮೊಗರು ಕೇಂದ್ರ ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರ ತೆರೆಯಲು ಸಂಬಂಧಪಟ್ಟವರು ಕ್ರಮ ವಹಿಸಬೇಕು, ಮಾತ್ರವಲ್ಲ ಆರೋಗ್ಯ ಸಚಿವರಿಗೂ ಈ ವಿಷಯದ ಬಗ್ಗೆ ಮನವಿ ಕೊಡಬೇಕು ಎಂದು ಅವರು ಆಗ್ರಹಿಸಿದರು.

ನರಿಮೊಗರು ವ್ಯಾಪ್ತಿಯಲ್ಲಿ ಪಶು ಚಿಕಿತ್ಸಾಲಯವೂ ಇಲ್ಲ, ಮುಂದಿನ ದಿನಗಳಲ್ಲಿ ಅದೂ ಆಗಬೇಕು. ಸದ್ಯಕ್ಕೆ ದಿನದಲ್ಲಿ ಒಂದು ಹೊತ್ತಾದರೂ ನರಿಮೊಗರು ವ್ಯಾಪ್ತಿಯಲ್ಲಿ ಪಶು ವೈದ್ಯಾಧಿಕಾರಿ ಇರುವಂತೆ ವ್ಯವಸ್ಥೆ ಮಾಡಬೇಕೆಂದು ವೇದನಾಥ ಸುವರ್ಣ ಒತ್ತಾಯಿಸಿದರು.

Leave a Reply

Your email address will not be published. Required fields are marked *

error: Content is protected !!