ಕರಾವಳಿ

ಸೌಜನ್ಯ ಹತ್ಯೆ ಪ್ರಕರಣ: ಮರು ತನಿಖೆಗೆ ಆಗ್ರಹಿಸಿ ಗೌಡ ಯುವ ಸೇವಾ ಸಂಘದಿಂದ ಸುಳ್ಯ ನಗರದಲ್ಲಿ ವಾಹನ ಜಾಥಾ



ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರುತನಿಖೆಗೊಳಪಡಿಸಿ ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೊಳಪಡಿಸಬೇಕೆಂದು ಆಗ್ರಹಿಸಿ ಅ.1ರಂದು ಸುಳ್ಯದಲ್ಲಿ ಗೌಡ ಯುವ ಸೇವಾ ಸಂಘದಿಂದ ವಾಹನ ಜಾಥಾ ಹಾಗೂ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮೊಗರ್ಪಣೆ ಶ್ರೀ ವೆಂಕಟರಮಣ ಸೊಸೈಟಿ ಮುಂಭಾಗದಿಂದ ವಾಹನ ಜಾಥಕ್ಕೆ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರ್ ಚಾಲನೆ ನೀಡಿ ಮಾತನಾಡಿ ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣವನ್ನು ಸರಕಾರ ಮರುತನಿಖೆಗೊಳಪಡಿಸಿ 6 ತಿಂಗಳೊಳಗೆ ನೈಜ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದರು.ಇಂದು ನಾವು ಸರಕಾರಕ್ಕೆ ಮನವಿ ನೀಡುತ್ತೇವೆ ಮುಂದಿನ ದಿನದಲ್ಲಿ ಬೃಹತ್ ಪ್ರತಿಭಟನೆಯನ್ನು ಸಂಘದ ವತಿಯಿಂದ ಹಮ್ಮಿಕೊಳ್ಳಲಿದ್ದೇವೆ ಎಂದು‌ ಹೇಳಿದರು.
ವಾಹನ ಜಾಥಾ ಮೂಲಕ ಸುಳ್ಯ‌ ನಗರದಲ್ಲಿ ಸಾಗಿ ತಾಲೂಕು ಕಚೇರಿಗೆ ಬಂದು ತಹಶೀಲ್ದಾರ್ ಮಂಜುನಾಥ್ ರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರು,ಸ್ಥಳೀಯ ನೂರಾರು ಮಂದಿ ಸಾರ್ವಜನಿರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!