ಕರಾವಳಿಜಿಲ್ಲೆ

ಉಡುಪಿ ವಿಡಿಯೋ ಪ್ರಕರಣ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?



ಉಡುಪಿ ಖಾಸಗಿ ಕಾಲೇಜಿನಲ್ಲಿ ನಡೆದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ, ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಡಿವೈಎಸ್ಪಿ ನೇತ್ವದಲ್ಲಿ ತನಿಖೆ ನಡೆಯುತ್ತಿದ್ದು, ಅದು ಮೊದಲು ನಡೆಯಲಿ. ರಾಷ್ಟ್ರೀಯ ಮಹಿಳಾ ಆಯೋಗವೇ ಅಲ್ಲಿ ಕ್ಯಾಮರಾ ಇಟ್ಟಿರಲಿಲ್ಲ ಎಂದಿದ್ದಾರೆ. ತನಿಖಾ ವರದಿ ಮೊದಲು ಬರಲಿ, ಆಮೇಲೆ ಈ ಬಗ್ಗೆ ಮಾತನಾಡುತ್ತೇನೆ ಎಂದರು.

ಕಾಲೇಜ್‌ನಲ್ಲಿ ಇರುವ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದು ಹೋಂ ಮಿನಿಸ್ಟರ್ ಹೇಳಿರಬಹುದು. ಎಫ್ಐಆರ್ ಆಗಿ ತನಿಖೆ ನಡೆಯುತ್ತಿದೆ. ಡಿವೈಎಸ್ಪಿ ಲೆವೆಲ್ ತನಿಖೆ ಆಗುತ್ತಿರುವ ಎಸ್ ಐಟಿ ತನಿಖೆ ಪ್ರಶ್ನೆ ಉದ್ಭವಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

error: Content is protected !!