ಕ್ರೈಂರಾಜ್ಯ

ಪುನೀತ್ ಕೆರೆಹಳ್ಳಿ ಅರೆಸ್ಟ್ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು



ಬೆಂಗಳೂರು: ಗೋರಕ್ಷಣೆ ಮತ್ತು ಹಿಂದುತ್ವದ ಹೆಸರಿನಲ್ಲಿ ಗೂಂಡಾಗಿರಿ ನಡೆಸುತ್ತಿದ್ದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಡರಾತ್ರಿಯೇ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಜೂನ್ 28ರಂದು ಸಹಾಯಕ ಪೊಲೀಸ್ ಆಯುಕ್ತರು ಪುನೀತ್ ಕೆರೆಹಳ್ಳಿಗೆ ನೋಟಿಸ್ ಜಾರಿ ಮಾಡಿದ್ದರು. ‘ಹಲವು ಪ್ರಕರಣಗಳ ಆರೋಪಿಯಾಗಿರುವ ನೀವು ಸ್ಪಷ್ಟೀಕರಣ ನೀಡದಿದ್ದಲ್ಲಿ ನಿಮ್ಮ ವಿರುದ್ಧ ರೌಡಿಶೀಟರ್ ಪಟ್ಟಿ ತೆರೆಯುತ್ತೇವೆ’ ಎಂದು ಎಚ್ಚರಿಸಿದ್ದರು ಎಂದು ತಿಳಿದು ಬಂದಿದೆ. ಈತನ ವಿರುದ್ಧ ಅನೇಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!