ಕರಾವಳಿ

ಕರಾವಳಿ

ಸುಳ್ಯ : ಬುರ್ಖಾ ಧರಿಸಿಕೊಂಡು ಸರ್ಪ್ರೈಸ್ ನೀಡಲು ಹೋಗಿ ಗೊಂದಲಕ್ಕೆ ಕಾರಣವಾದ ಯುವಕರು..!

ಸುಳ್ಯ: ಸರ್ಪ್ರೈಸ್ ನೀಡಲು ಹೋಗಿ ಯುವಕರಿಬ್ಬರು ಪೇಚಿಗೆ ಸಿಲುಕಿದ ಘಟನೆ ತಾಲೂಕಿನ ದುಗ್ಗಲಡ್ಕ ಕ್ಲಿನಿಕ್ ವೊಂದರಲ್ಲಿ ನಡೆದ ಬಗ್ಗೆ ವರದಿಯಾಗಿದೆ. ತಮ್ಮ ಸಹೋದರಿಯಾಗಿರುವ ವೈದ್ಯರಿಗೆ ಸರ್ಪ್ರೈಸ್ ನೀಡಲೆಂದು

Read More
ಕರಾವಳಿ

ಸುಳ್ಯ: ಉರುಳಿಗೆ ಸಿಲುಕಿ ಚಿರತೆ‌ ಸಾವು- ಇಬ್ಬರ ವಿರುದ್ದ ಪ್ರಕರಣ ದಾಖಲು

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಉರುಳಿಗೆ ಸಿಲುಕಿ ಸುಮಾರು ಒಂದೂವರೆ ವರ್ಷ ಪ್ರಾಯದ ಹೆಣ್ಣು ಚಿರತೆ ಮರಿ ಸಾವಿಗೀಡಾಗಿದ್ದು, ಉರುಳಿಟ್ಟ ಆರೋಪದಲ್ಲಿ ಜಾಗದ ಮಾಲಕರ

Read More
ಕರಾವಳಿಕ್ರೈಂ

ಉಪ್ಪಿನಂಗಡಿ: ಯುವತಿಯ ವಿಚಾರದಲ್ಲಿ ಯುವಕನಿಗೆ ಹಲ್ಲೆ- ಇಬ್ಬರ ವಿರುದ್ದ ಪ್ರಕರಣ ದಾಖಲು

ಉಪ್ಪಿನಂಗಡಿ: ಯುವಕನೋರ್ವನಿಗೆ ಇಬ್ಬರು ಹಲ್ಲೆ ನಡೆಸಿದ ಘಟನೆ ಆ.29ರಂದು ಉಪ್ಪಿನಂಗಡಿಯಲ್ಲಿ ನಡೆದಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಯೋರ್ವಳ ವಿಚಾರಕ್ಕೆ ಸಂಬಂಧಿಸಿ ಆಕೆಯ

Read More
ಕರಾವಳಿ

ಕರ್ನಾಟಕ ಮುಸ್ಲಿಂ ಜಮಾಅತ್ ಪುತ್ತೂರು ಸರ್ಕಲ್‌ನಿಂದ ದ್ವೇಷ ಬಿಟ್ಟು ದೇಶ ಕಟ್ಟು’ ಪ್ರಜಾಭಾರತ ಸಂಗಮ

ಕರ್ನಾಟಕ ಮುಸ್ಲಿಂ ಜಮಾಅತ್ (ಕೆಎಂಜೆ) ಪುತ್ತೂರು ಸರ್ಕಲ್ ವತಿಯಿಂದ ಸರ್ಕಲ್ ಅಧ್ಯಕ್ಷ ಯೂಸುಫ್ ಗೌಸಿಯ ಸಾಜ ಅಧ್ಯಕ್ಷತೆಯಲ್ಲಿ ‘ದ್ವೇಷ ಬಿಟ್ಟು ದೇಶ ಕಟ್ಟು’ ಎಂಬ ಶಿರ್ಷಿಕೆಯಡಿಯಲ್ಲಿ ‘ಪ್ರಜಾಭಾರತ ಸಂಗಮ’ ಪುತ್ತೂರು ಸುನ್ನೀ ಸೆಂಟರ್‌ನಲ್ಲಿ ನಡೆಯಿತು. ಸಭೆ ಉದ್ಘಾಟಿಸಿದ ಎಸ್‌ವೈಎಸ್ ಜಿಲ್ಲಾ ನಾಯಕ ಸಿರಾಜುದ್ದೀನ್ ಸಖಾಫಿ ಮಾತನಾಡಿ ಜಾತಿ ಧರ್ಮದೆಡೆಯಲ್ಲಿರುವ ದ್ವೇಷ ವೈಷಮ್ಯ ಮಾಯವಾಗಿ ಸುಂದರ ವಾತಾವರಣದ ಕರ್ನಾಟಕವನ್ನು ಕಟ್ಟಲು ನಾವು ಮುಂದಾಗಬೇಕು ಎಂದರು. ಹಾರಾಡಿ ಪ್ರಾಥಮಿಕ ಶಾಲೆ ಮುಖೋಪಾಧ್ಯಾಯರಾದ ಕುಕ್ಕ ಮಾಸ್ಟರ್ ಮಾತನಾಡಿ ಮಕ್ಕಳು ಕೆಟ್ಟ ಚಟುವಟಿಕೆಗಳಿಗೆ ಬಲಿಯಾಗದಂತೆ ಪೋಷಕರು ಎಚ್ಚರಿಕೆ ವಹಿಸಬೇಕೆಂದು ಹೇಳಿದರು. ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ದೈ.ಶಿ.ಶಿಕ್ಷಕ ದಯಾನಂದ ರೈ ಕೋರ್ಮಂಡ ಮಾತನಾಡಿ ಸೌಹಾರ್ಧ ಭಾರತವನ್ನು ಕಟ್ಟಲು ನಾವೆಲ್ಲಾ ಶ್ರಮಿಸಬೇಕೆಂದು ಹೇಳಿದರು. ಕೆ ಕೃಷ್ಣಪ್ಪರವರು ಮಾತನಾಡಿ ಭಾರತ ದೇಶದ ಮಣ್ಣು ಯಾವತ್ತೂ ಸೌಹಾರ್ದ ಮಣ್ಣಾಗಿದೆ ಎಂದು ಹೇಳಿದರು. ಆದಂ ಹಾಜಿ ಪಡೀಲ್, ಇಸ್ಮಾಯಿಲ್ ಹಾಜಿ ಬನ್ನೂರು, ಇಕ್ಬಾಲ್ ಬಪ್ಪಳಿಗೆ, ಇಸ್ಮಾಯಿಲ್ ಹಾಜಿ ಕೊಂಬಾಳಿ, ಅಬೂಬಕ್ಕರ್ ಪಾಪ್ಲಿ, ನರಿಮೊಗರು ಮುಹಮ್ಮದ್ ಹಾಜಿ ಪಾಪೆತ್ತಡ್ಕ ಮುಂತಾದವರು ಉಪಸ್ಥಿತರಿದ್ದರು. ಸೌಹಾರ್ದ ದೇಶದ ಉದ್ದೇಶ-ಯೂಸುಫ್ ಗೌಸಿಯಾ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಆದೇಶದ ಪ್ರಕಾರ ಕರ್ನಾಟಕ ಮುಸ್ಲಿಂ ಜಮಾಅತ್‌ನ ಪ್ರತೀ ಸರ್ಕಲ್ ವತಿಯಿಂದ ದ್ವೇಷ ಬಿಟ್ಟು ದೇಶ ಕಟ್ಟು’ ಪ್ರಜಾಭಾರತ ಸಂಗಮ ಕಾರ್ಯಕ್ರಮ ಆಯೋಜನೆಯಾಗುತ್ತಿದ್ದು ಎಲ್ಲಾ ಜಾತಿ, ಧರ್ಮದವರನ್ನು ಒಂದೇ ವೇದಿಕೆಗೆ ತಂದು ಸೌಹರ್ದದ ದೇಶ ಕಟ್ಟುವುದು ಇದರ ಉದ್ದೇಶವಾಗಿದೆ. ಅದರಂತೆ ನಮ್ಮ ಪುತ್ತೂರು ಸರ್ಕಲ್ ವತಿಯಿಂದ ಯಶಸ್ವಿಯಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ -ಯೂಸುಫ್ ಗೌಸಿಯ ಸಾಜ, ಅಧ್ಯಕ್ಷರು ಕೆಎಂಜೆ  ಪುತ್ತೂರು ಸರ್ಕಲ್

Read More
ಕರಾವಳಿ

ಸುಳ್ಯ: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ‌ ಬಿದ್ದಿದ್ದ  ‌ಗ್ರಾಮ ಕರಣಿಕ‌ಗೆ ಜಾಮೀನು ಮಂಜೂರು

ಸುಳ್ಯ ಕಂದಾಯ‌ ನಿರೀಕ್ಷಕರ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ‌ ಬಿದ್ದಿದ್ದ ಅರಂತೋಡು ‌ಗ್ರಾಮ ಕರಣಿಕ‌ಗೆ ಜಾಮೀನು ಮಂಜೂರಾಗಿರುವುದಾಗಿ ತಿಳಿದು ಬಂದಿದೆ. ಹಕ್ಕು ಖುಲಾಸೆ ಪ್ರಕರಣಕ್ಕೆ ಸಂಬಂಧಿಸಿದಂತೆ

Read More
ಕರಾವಳಿ

ನಾನು ಬಡತನದಿಂದ ಮೇಲೆ ಬಂದವ, ನನ್ನ ಕ್ಷೇತ್ರದಲ್ಲಿ ಯಾರೂ ಹಸಿವಿನಿಂದ ಇರಬಾರದು: ಅಶೋಕ್ ರೈ

ಪುತ್ತೂರು: ನಾನು ಬಡತನದಿಂದ ಮೇಲೆ ಬಂದವ, ಬಡತನ ಏನೆಂಬುದು ನನಗೆ ಗೊತ್ತಿದೆ ಈ ಕಾರಣ ನಾನು ಹಸಿವನ್ನು ಚೆನ್ನಾಗಿ ಬಲ್ಲೆ, ನಾನು ಈಗ ಶಾಸಕನಾಗಿದ್ದೇನೆ ನನ್ನ ಕ್ಷೇತ್ರದಲ್ಲಿ

Read More
ಕರಾವಳಿ

ಬಲೆಗೆ ಬಿದ್ದ ಭಾರೀ ಉದ್ದದ ಬಂಗುಡೆ

ಕಾರವಾರ: ಮೀನುಗಾರರು ಬೀಸಿದ ಬಲೆಗೆ 48 ಸೆಂಟಿ ಮೀಟರ್ ಉದ್ದದ ಬಂಗುಡೆ ಮೀನು ಸಿಕ್ಕಿದ್ದು, ದೇಶದಲ್ಲೇ ಅತೀ ದೊಡ್ಡದು ಎನ್ನಬಹುದಾದ ಬಂಗುಡೆ ರವಿವಾರ ಸಿಕ್ಕಿದೆ. ಈ ಬಂಗುಡೆ 19

Read More
ಕರಾವಳಿಕ್ರೈಂ

ವಿಡಿಯೋ ಮಾಡಿದ ಬಳಿಕ ವಿಷ ಸೇವಿಸಿದ್ದ ಅಬ್ದುಲ್ ನಾಸಿರ್ ಮೃತ್ಯು: 8 ಮಂದಿಯ ವಿರುದ್ಧ ಪ್ರಕರಣ ದಾಖಲು

ವಿಡಿಯೋ ಮಾಡಿದ ಬಳಿಕ ವಿಷ ಸೇವಿಸಿದ್ದ ಕಟ್ಟತ್ತಾರು ನಿಡ್ಯಣದ ಅಬ್ದುಲ್ ನಾಸಿರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆ.22ರಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 55/2023 ಕಲಂ 341,323,

Read More
ಕರಾವಳಿ

ಮೈದಾನಿಮೂಲೆ ಜುಮಾ ಮಸೀದಿ ಅಧ್ಯಕ್ಷರಾಗಿ ಉದ್ಯಮಿ ಯೂಸುಫ್ ಹಾಜಿ ಕೈಕಾರ 

ಪುತ್ತೂರು: ಮೈದಾನಿಮೂಲೆ ಜುಮಾ ಮಸೀದಿ ಅಧ್ಯಕ್ಷರಾಗಿ ಉದ್ಯಮಿ ಯೂಸುಫ್ ಹಾಜಿ  ಕೈಕಾರ ಆಯ್ಕೆಯಾಗಿದ್ದಾರೆ.  ಮಸೀದಿ ಗೌರವಾಧ್ಯಕ್ಷರಾದ ಅಸ್ಸಯ್ಯಿದ್ ಮುಝ್ಝಮ್ಮಿಲ್ ತಂಙಳ್ ಕಾಸರಗೋಡು ನೇತೃತ್ವದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಪ್ರಧಾನ ಕಾರ್ಯದರ್ಶಿಯಾಗಿ ಉದ್ಯಮಿ ಯೂಸುಫ್ ಮೈದಾನಿಮೂಲೆ ಹಾಗೂ ಕೋಶಾಧಿಕಾರಿಯಾಗಿ ಒಳಮೊಗ್ರು ಗ್ರಾ.ಪಂ ಉಪಾಧ್ಯಕ್ಷರಾದ ಅಶ್ರಫ್ ಉಜ್ರೋಡಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಉದ್ಯಮಿಗಳಾದ ಕೆ ಪಿ ಮುಹಮ್ಮದ್ ಮತ್ತು ರಫೀಕ್ ಅಲ್ ರಾಯ, ಜತೆ ಕಾರ್ಯದರ್ಶಿಗಳಾಗಿ ಮುನೀರ್ ಉಜ್ರೋಡಿ, ಅಝೀಝ್ ನೀರ್ಪಾಡಿ ಆಯ್ಕೆಯಾದರು. ಸದಸ್ಯರಾಗಿ ಹಸೈನಾರ್ ಎಂ ಎಂ, ಹಂಝ ಉಜಿರೋಡಿ, ಮುಹಮ್ಮದ್ ಉಜ್ರೋಡಿ (ಮಾಮು), ಉಮರ್ ನೀರ್ಪಾಡಿ, ಮುಹಮ್ಮದ್ ಕುಂಞ್ಞಿ ಇಡಿಂಜಿಲ, ರಫೀಕ್ ಎಂ ಎಂ, ಕೆ ಎ ಅಬೂಬಕರ್, ಮೊಯ್ದೀನ್ ಉಜ್ರೋಡಿ, ಇಬ್ರಾಹಿಂ ಬಾಳಯ, ಮುಸ್ತಫಾ ಮುರ್ವ ಆಯ್ಕೆಯಾದರು. ಲೆಕ್ಕಪರಿಶೋಧಕರಾಗಿ ಹಾರೀಸ್ ಮುಗೇರು ಆಯ್ಕೆಯಾದರು.

Read More
ಕರಾವಳಿರಾಜಕೀಯ

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರ ಬಹುನಿರೀಕ್ಷಿತ  ಕಚೇರಿ ನಾಳೆ (ಆ.28) ಉದ್ಘಾಟನೆ

ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರ ಬಹುನಿರೀಕ್ಷಿತ ಕಚೇರಿ ಆ.28ರಂದು ಉದ್ಘಾಟನೆಗೊಳ್ಳಲಿದೆ. ಶಾಸಕರಾಗಿ ನೂರು ದಿನದ ಬಳಿಕ ಶಾಸಕರ ಅಧಿಕೃತ ಕಚೇರಿ ಮಿನಿ ವಿಧಾನಸೌಧದ ಬಳಿ ಇರುವ ಹಳೆಯ ಪುರಸಭಾ ಕಚೇರಿ (ಪುಡಾಕಚೇರಿ)ಯಲ್ಲಿ ಉದ್ಘಾಟನೆಗೊಳ್ಳಲಿದ್ದು ಹಲವಾರು ಮಂದಿ ಗಣ್ಯರು ಭಾಗವಹಿಸಲಿದ್ದಾರೆ.  ವಿಶಾಲ ಸ್ಥಳಾವಕಾಶವನ್ನು ಹೊಂದಿರುವ ಕಚೇರಿಯಲ್ಲಿ ಶಾಸಕರನ್ನು ಭೇಟಿಯಾಗಲು ಬರುವವರಿಗೆ, ಅಥವಾ ಕಚೇರಿಗೆ  ಬರುವ ಸಾರ್ವಜನಿಕರಿಗೆ ಎಲ್ಲಾ ಸೌಕರ್ಯಗಳನ್ನೊಳನ್ನು ಈ ಕಚೇರಿ ಹೊಂದಿದೆ. ಪಾರ್ಕಿಂಗ್ ವ್ಯವಸ್ಥೆಯೂ ಸಾಕಷ್ಟಿದೆ. ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್, ಮಾಜಿ ಸಚಿವ ಬಿ ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸೇರಿದಂತೆ ಪ್ರಮುಖ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಕಚೇರಿ ಉದ್ಘಾಟನೆ ಬಳಿಕ ಸುಮಾರು 160 ಕುಟುಂಬಗಳಿಗೆ ಶಾಸಕರು ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸಾರ್ವಜನಿಕರಿಗೆ ತ್ವರಿತಗತಿಯ ಸೇವೆ ನೀಡುವುದು ಈ ಕಚೇರಿಯ ಉದ್ದೇಶವಾಗಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ಈ ಕಚೇರಿಗೆ ಬಂದರೆ ಶಾಸಕರನ್ನು ಭೇಟಿಯಾಗಬಹುದು. ಕಚೇರಿಯಲ್ಲಿ ಸಾರ್ವಜನಿಕರಿಂದ ಎಲ್ಲಾ ರೀತಿಯ ಅರ್ಜಿಗಳನ್ನು ಸ್ವೀಕರಿಸಲು ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗಿದೆ. ಯಾವುದೇ ಇಲಾಖೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ಯಾವುದೆ ಇಲಾಖೆಯಲ್ಲಿ ಕೆಲಸ ಕಾರ್ಯಗಳು ನಡೆಯದೆ ಇದ್ದಲ್ಲಿ ಶಾಸಕರ ಕಚೇರಿಯಲ್ಲಿರುವ ಆಯಾ ಇಲಾಖೆಗೆ ಸಂಬಂಧಿಸಿದ ಸಿಬಂದಿಗಳನ್ನು ಭೇಟಿಯಾಗಿ ಮಾತನಾಡಬಹುದಾಗಿದೆ. ಕೆಲವೊಂದು ಸಮಸ್ಯೆಗಳಿಗೆ ಕಚೇರಿಯ ಸಿಬಂದಿಗಳೇ ಪರಿಹಾರ ಸೂಚಿಸುವ ಕೆಲಸವನ್ನು ಮಾಡಲಿದ್ದಾರೆ. ನನ್ನ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಮಿನಿ ವಿಧಾನಸೌಧದ ಬಳಿಯೇ ಹೊಸ ಕಚೇರಿಯನ್ನು ತೆರೆದಿದ್ದು ಸಾರ್ವಜನಿಕರ ಸೇವೆಗೆ ಸಿಬಂದಿಗಳನ್ನು ನೇಮಕ ಮಾಡಿದ್ದೇನೆ. ಯಾವುದೇ ಸಮಸ್ಯೆಗಳಿದ್ದರೂ, ತೊಂದರೆಗೊಳಗಾದವರು ಶಾಸಕರ ಕಚೇರಿಗೆ ಬಂದು ತಿಳಿಸಬಹುದು. ದೂರು, ಮನವಿ ಇದ್ದರೂ ಕೊಡಬಹುದು. ಕ್ಷೇತ್ರದ ಎಲ್ಲರಿಗೂ ನನ್ನ ಕಚೇರಿಗೆ ಮುಕ್ತವಾಗಿ ಬರಲು ಅವಕಾಶ ಇದೆ ಎಂದು ಶಾಸಕ ಅಶೋಕ್ ಕುಮಾರ್ ತಿಳಿಸಿದ್ದಾರೆ.

Read More
error: Content is protected !!