ಕರಾವಳಿ

ಕರಾವಳಿ

ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು: ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.ಸಂಸ್ಥೆಯ ನಿರ್ದೇಶಕರಾದ ಬಾತಿಶಾ ಕನಕಮಜಲು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು

Read More
ಕರಾವಳಿ

ಕೋಡಿಂಬಾಡಿ ಗ್ರಾ.ಪಂ: ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಬೆಂಬಲಿಗರ ಪಾಲಾದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ

ಪುತ್ತೂರು: ಕೋಡಿಂಬಾಡಿ ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಲ್ಲಿಕಾ ಅಶೋಕ್ ಹಾಗೂ ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರ್ ಆಯ್ಕೆ ಒಟ್ಟು 11 ಮಂದಿ ಸದಸ್ಯರ ಪೈಕಿ 6 ಬಿಜೆಪಿ

Read More
ಕರಾವಳಿರಾಜಕೀಯ

ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ವಸಂತ ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ ವಸಂತ ಶೆಟ್ಟಿಯವರು ಬಿಜೆಪಿ ತೊರೆದು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಣಕ್ಕೆ ಸೇರ್ಪಡೆಯಾದರು. ಬ್ಲಾಕ್ ಅಧ್ಯಕ್ಣ ಎಂ ಬಿ

Read More
ಕರಾವಳಿ

ಅಮ್ಚಿನಡ್ಕ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ನೂತನ ಧ್ವಜಸ್ಥಂಭ ಉದ್ಘಾಟನೆ-ಸಾಧಕರಿಗೆ ಸನ್ಮಾನ

ಪುತ್ತೂರು: ಬದ್ರಿಯಾ ಜುಮಾ ಮಸೀದಿ ಅಮ್ಚಿನಡ್ಕ ಹಾಗೂ ಅಲ್ ಬದ್ರಿಯಾ ಯೂತ್ ವಿಂಗ್ ಇದರ ಜಂಟಿ ಆಶ್ರಯದಲ್ಲಿ ೭೭ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಸೀದಿ ವಠಾರದಲ್ಲಿ ನಡೆಯಿತು. ಅಮ್ಚಿನಡ್ಕ ಮಸೀದಿಯ ಅಧ್ಯಕ್ಷ ಅಬ್ದುಲ್ ಖಾದರ್ ಸಿ.ಎ ಧ್ವಜಾರೋಹಣ ನೆರವೇರಿಸಿದರು. ಬದ್ರಿಯಾ ಯೂತ್ ವಿಂಗ್ ಅಧ್ಯಕ್ಷ ಅಬ್ದುಲ್ ಮಜೀದ್ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಖತೀಬ್ ಅಬ್ದುಲ್ ಸಲಾಂ ಫೈಝಿ ಸಂದೇಶ ಭಾಷಣ ಮಾಡಿದರು. ಅಮ್ಚಿನಡ್ಕ ಮಸೀದಿಯ ಮುಅಲ್ಲಿಂ ಇಬ್ರಾಹಿಂ ಬಾತಿಷಾ ಝುಹ್ರಿ ಆಶಂಸ ಭಾಷಣ ನಡೆಸಿದರು.  ಇದೇ ಸಂದರ್ಭದಲ್ಲಿ ಮಸೀದಿ ಮುಂಭಾಗದಲ್ಲಿ ನಿರ್ಮಾಣಗೊಂಡ ನೂತನ ಧ್ವಜಸ್ಥಂಭವನ್ನು ಉದ್ಘಾಟಿಸಲಾಯಿತು. ಸನ್ಮಾನ: ಮಸೀದಿಯಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಅಬ್ದುಲ್ ಖಾದರ್ ಕೆ.ಕೆ, ವೈದ್ಯಕೀಯ ಕ್ಷೇತ್ರದ ಸೇವೆಗಾಗಿ ಡಾ.ನಝೀರ್ ಅಹ್ಮದ್, ಖಬರ್ ಕಾರ್ಯ ನಿರ್ವಹಿಸುವ ನಿಸ್ವಾರ್ಥ ಸೇವೆಗಾಗಿ ಇಸ್ಮಾಯಿಲ್ ಕೆ.ಎಂ, ಅರಿಯಡ್ಕ ಗ್ರಾ.ಪಂನ ಜನ ಮೆಚ್ಚಿದ ವಾಟರ್‌ಮೆನ್ ನಾರಾಯಣ ಗೌಡ, ಯುವ ಸಾಮಾಜಿಕ ಹೋರಾಟಗಾರ ಎಡ್ವರ್ಡ್ ಡಿಸೋಜಾ ಮೊದಲಾದವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಅಮ್ಚಿನಡ್ಕ ಮಸೀದಿಯ ಮಾಜಿ ಅಧ್ಯಕ್ಷರಾದ ಹಾಜಿ ಅಡ್ಕಾರ್ ಮಹಮ್ಮದ್ ಹಾಗೂ ಹಸೈನಾರ್ ಹಾಜಿ, ಬದ್ರಿಯಾ ಯೂತ್ ವಿಂಗ್‌ನ ಮಾಜಿ ಅಧ್ಯಕ್ಷರಾದ ಖಲಂದರ್, ಅಝೀಝ್, ಹಾಶಿಂ ಅನ್ಸಾರಿ, ಸಾದಿಕ್, ಮಸೀದಿಯ ಕೋಶಾಧಿಕಾರಿ ಯೂಸುಫ್ ಹಾಜಿ, ಸಾಮಾಜಿಕ ಕಾರ್ಯಕರ್ತ ರಶೀದ್ ಅಮ್ಚಿನಡ್ಕ ಸಹಿತ ಜಮಾಅತರು,, ಸರ್ವ ಧರ್ಮಿಯರು, ಊರವರು ಉಪಸ್ಥಿತರಿದ್ದರು. ಬದ್ರಿಯಾ ಯೂತ್ ವಿಂಗ್‌ನ ಪ್ರ.ಕಾರ್ಯದರ್ಶಿ ಸಿದ್ದೀಕ್ ಎಂ.ಕೆ ಸ್ವಾಗತಿಸಿದರು. ಉಪಾಧ್ಯಕ್ಷ ಆಶಿಕ್ ಮುಖಾರಿಮೂಲೆ ವಂದಿಸಿದರು. 

Read More
ಕರಾವಳಿ

ಸುಳ್ಯ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಸೇವೆಯಲ್ಲಿ ಕರ್ತವ್ಯ ನಿಷ್ಠೆ ಮತ್ತು ಒಗ್ಗಟ್ಟಿನ ಶಕ್ತಿ ಇರಲಿ: ನವೀನ್ ಚಂದ್ರಜೋಗಿ

ಸುಳ್ಯ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಅವರು ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳನ್ನು ನೀಡಿ

Read More
ಅಂಕಣಗಳುಕರಾವಳಿ

‘ವೈದ್ಯರು ದೇವ ಸಮಾನರು’ ಎಂಬ ಮಾತು ಮತ್ತೊಮ್ಮೆ ಸಾಬೀತಾಯಿತು

ಬರಹ: ನೂರುದ್ದೀನ್ ಸಾಲ್ಮರ ನ್ಯಾಯವಾದಿ, ಪುತ್ತೂರು ಕಳೆದ ಜುಲೈ ತಿಂಗಳ ಭಯಾನಕ ಮಳೆ. ರಾತ್ರಿ ಸುಮಾರು ಹತ್ತು ಗಂಟೆ ಯಾಗಿತ್ತು. ಆ ದಿನ,ನನ್ನ ಸ್ನೇಹಿತನ ತಂದೆಯವರು ಅಕಾಲಿಕ

Read More
ಕರಾವಳಿ

ಸುಳ್ಯ: ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಮೃತ್ಯು

ಸುಳ್ಯ ಶಾಂತಿನಗರ ನಿವಾಸಿ 17 ವರ್ಷದ ಬಾಲಕ ಹೊಟ್ಟೆ ನೋವು ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸುಳ್ಯ

Read More
ಕರಾವಳಿರಾಜಕೀಯ

ಒಳಮೊಗ್ರು ಗ್ರಾ.ಪಂ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತ್ರಿವೇಣಿ ಪಳ್ಳತ್ತಾರು, ಉಪಾಧ್ಯಕ್ಷರಾಗಿಕಾಂಗ್ರೆಸ್ ಬೆಂಬಲಿತ ಅಶ್ರಫ್ ಉಜಿರೋಡಿ ಆಯ್ಕೆ

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ತ್ರಿವೇಣಿ ಪಳ್ಳತ್ತಾರು ಹಾಗೂ ಉಪಾಧ್ಯಕ್ಷರಾಗಿ ಅಶ್ರಫ್ ಉಜಿರೋಡಿ ಆಯ್ಕೆಯಾಗಿದ್ದಾರೆ. ಒಳಮೊಗ್ರು ಗ್ರಾ.ಪಂಗೆ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ನಿಗದಿಯಾಗಿತ್ತು. ಆ.14ರಂದು ಆಯ್ಕೆ ಪ್ರಕ್ರಿಯೆ ನಡೆಯಿತು. ಒಟ್ಟು 15 ಮಂದಿ ಸದಸ್ಯ ಬಲ ಹೊಂದಿರುವ ಒಳಮೊಗ್ರು ಗ್ರಾ.ಪಂನಲ್ಲಿ 7 ಮಂದಿ ಬಿಜೆಪಿ ಬೆಂಬಲಿತರು, 7 ಕಾಂಗ್ರೆಸ್ ಬೆಂಬಲಿತರು ಮತ್ತು ಓರ್ವ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ. ಅದರಲ್ಲಿ 14 ಮಂದಿ ಭಾಗವಹಿಸಿದ್ದು ಕಾಂಗ್ರೆಸ್ ಬೆಂಬಲಿತ ಸದಸ್ಯ ಲತೀಫ್ ಗೈರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರು, ಹಾಲಿ ಅಧ್ಯಕ್ಷೆಯಾಗಿರುವ ತ್ರಿವೇಣಿ ಪಳ್ಳತ್ತಾರು ಹಾಗೂ ಕಾಂಗ್ರೆಸ್ ಬೆಂಬಲಿತ ಚಿತ್ರಾ ಬಿ.ಸಿ ನಾಮಪತ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಮಹೇಶ್ ಕೇರಿ, ಕಾಂಗ್ರೆಸ್ ಬೆಂಬಲಿತರಾಗಿ ಅಶ್ರಫ್ ಉಜಿರೋಡಿ ಹಾಗೂ ಎಸ್‌ಡಿಪಿಐ ಬೆಂಬಲಿತ ಅಬ್ದುಲ್ ಸಿರಾಜ್ ನಾಮಪತ್ರ ಸಲ್ಲಿಸಿದ್ದರು. ನಂತರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಆ ಬಳಿಕ ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ತ್ರಿವೇಣಿ ಪಳ್ಳತ್ತಾರು ಹಾಗೂ ಚಿತ್ರಾ ಬಿ.ಸಿಯವರು ತಲಾ 7ಮತ ಪಡೆದಿದ್ದರು. ಸಮಾನ ಮತ ಪಡೆದ ಕಾರಣ ಟಾಸ್ ಹಾಕುವ ಮೂಲಕ ವಿಜೇತರನ್ನು ಘೋಷಿಸಲಾಯಿತು. ಅದರಂತೆ ಟಾಸ್ ನಡೆದಾಗ ಬಿಜೆಪಿ ಬೆಂಬಲಿತ ಅಭ್ಯರ್ಥಿ ತ್ರಿವೇಣಿ ಪಳ್ಳತ್ತಾರು ಟಾಸ್ ಗೆದ್ದುಕೊಂಡು ಅಧ್ಯಕ್ಷರಾಗಿ ಆಯ್ಕೆಗೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಶ್ರಫ್ ಉಜಿರೋಡಿ ಹಾಗೂ ಮಹೇಶ್ ಕೇರಿ ಅವರು ತಲಾ 7 ಮತ ಪಡೆದರು. ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ ಅಬ್ದುಲ್ ಸಿರಾಜ್ ಯಾವುದೇ ಮತ ಪಡೆದಿರಲಿಲ್ಲ. ಅಂತಿಮವಾಗಿ ಟಾಸ್ ಹಾಕಿದಾಗ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಶ್ರಫ್ ಉಜಿರೋಡಿ ಟಾಸ್ ಗೆದ್ದು ಉಪಾಧ್ಯಕ್ಷರಾಗಿ ಆಯ್ಕೆಯಾದರು. ಸ್ವತಃ ಉಪಾಧ್ಯಕ್ಷ ಸ್ಥಾನಕ್ಕೆ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಬ್ದುಲ್ ಸಿರಾಜ್ ಅವರು ನಾಮಪತ್ರ ವಾಪಸ್ ಪಡೆಯದೇ ಕಣದಲ್ಲಿದ್ದರು. ಆದರೂ ಅವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗ ಅಶ್ರಫ್ ಉಜಿರೋಡಿಗೆ ಮತ ಚಲಾಯಿಸಿಸುವ ಮೂಲಕ ತನ್ನ ಮತವನ್ನೂ ತನಗೆ ಹಾಕಿಕೊಳ್ಳದೇ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು ಎನ್ನುವ ಮಾಹಿತಿ ತಿಳಿದು ಬಂದಿದೆ.

Read More
ಕರಾವಳಿರಾಜಕೀಯ

ಆರ್ಯಾಪು ಗ್ರಾ.ಪಂ: ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಆರ್ಯಾಪು ಗ್ರಾಪಂನ ಇಬ್ಬರು ಗ್ರಾಪಂ ಸದಸ್ಯರು ಶಾಸಕರಾದ ಅಶೋಕ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಣಕ್ಕೆ

Read More
ಕರಾವಳಿ

ಪುತ್ತೂರು: ಶಾಲಾ ಧ್ವಜಸ್ತಂಭದ ಸುತ್ತ ಸ್ವಚ್ಛಗೊಳಿಸಿ ಮಾದರಿಯಾದ ಎಸ್‌ಡಿಎಂಸಿ ಸದಸ್ಯ

ಪುತ್ತೂರು: ಶಾಲಾ ಎಸ್‌ಡಿಎಂಸಿ ಸದಸ್ಯರೋರ್ವರು ಶಾಲಾ ಪರಿಸರ ಸ್ವಚ್ಛಗೊಳಿಸಿ ಮಾದರಿಯಾಗಿದ್ದಾರೆ. ಮುಕ್ವೆ ಸ.ಹಿ.ಪ್ರಾ.ಶಾಲೆಯ ಎಸ್‌ಡಿಎಂಸಿ ಸದಸ್ಯರಾಗಿರುವ ಪುರುಷರಕಟ್ಟೆ ನಿವಾಸಿ ಶೇಕ್ ಮಹಮ್ಮದ್ ಹನೀಫ್ ಎಂಬವರು ಶಾಲಾ ಮುಂಭಾಗದಲ್ಲಿರುವ ಧ್ವಜಸ್ತಂಭದ ಸುತ್ತ ಬೆಳೆದಿದ್ದ ಹುಲ್ಲು ಗಿಡಗಂಟಿಗಳನ್ನು ಯಂತ್ರದ ಮೂಲಕ ಸ್ವಂತ ಖರ್ಚಿನಲ್ಲಿ ತೆರವುಗೊಳಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.  ಇವರು ಈ ಹಿಂದೆಯೂ ಮುಕ್ವೆ ಶಾಲಾ ಪರಿಸರವನ್ನು ಶುಚಿತ್ವಗೊಳಿಸಿದ್ದರು. ಇವರ ಕಾರ್ಯಕ್ಕೆ ಶಾಲಾ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ. ನನ್ನ ಮೂವರು ಮಕ್ಕಳು ಮುಕ್ವೆ ಶಾಲೆಯಲ್ಲಿ ಕಲಿಯುತ್ತಿದ್ದಾರೆ. ನಮ್ಮ ಮನೆಯ ಪರಿಸರವನ್ನು ನಾವು ಸ್ವಚ್ಛವಾಗಿಡುವಂತೆ ಶಾಲೆಯ ಪರಿಸರವನ್ನೂ ಸ್ವಚ್ಛವಾಗಿಡುವುದು ನಮ್ಮ ಕರ್ತವ್ಯ. ಹಿಂದೆಯೂ ನಾನು ಶಾಲೆ, ಅಂಗನವಾಡಿ ಪರಿಸರ ಸ್ವಚ್ಛತೆ ಮಾಡಿದ್ದೇನೆ ಎಂದು ಶೇಕ್ ಮಹಮ್ಮದ್ ಹನೀಫ್ ಹೇಳಿಕೊಂಡಿದ್ದಾರೆ.

Read More
error: Content is protected !!