ಕರಾವಳಿ

ಕರಾವಳಿ

ಈಶ್ವರಮಂಗಲದಲ್ಲಿ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರ ಸಂಘದ ಶಾಖೆ ಪ್ರಾರಂಭಿಸುವ ಕುರಿತು ಸಮಾಲೋಚನಾ ಸಭೆ

ಪುತ್ತೂರು: ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಇದರ ಈಶ್ವರಮಂಗಲ ಶಾಖೆ ತೆರೆಯುವ ಕುರಿತು ಸಮಾಲೋಚನಾ ಸಭೆ ಈಶ್ವರಮಂಗಲ ಹಿರಾ ಟವರ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಅಲ್ಪ ಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಸುಳ್ಯ ಇದರ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಎಲಿಮಲೆ ಮಾತನಾಡಿ ಅಲ್ಪ ಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘವು ಸುಳ್ಯದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದ್ದು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯವ್ಯಾಪ್ತಿಯನ್ನು ಹೊಂದಿದೆ. ಸುಮಾರು 25 ವರ್ಷಗಳ ಹಿಂದೆ ಸ್ಥಾಪನೆಗೊಂಡ ಈ ಸಂಸ್ಥೆಯು ಉತ್ತಮ ಅಭಿವೃದ್ಧಿಯನ್ನು ಹೊಂದಿದ್ದು ಸುಮಾರು ನಾಲ್ಕು ಸಾವಿರ ಮಂದಿ ಸದಸ್ಯರನ್ನು ಹೊಂದಿದೆ, ವಾರ್ಷಿಕವಾಗಿ ಸುಮಾರು ರೂ.55 ಕೋಟಿಗಿಂತಲೂ ಹೆಚ್ಚಿನ ವ್ಯವಹಾರ ಮಾಡಿದ್ದು ಉತ್ತಮ ವ್ಯವಹಾರಕ್ಕಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಪ್ರಶಸ್ತಿ ಕೂಡಾ ಲಭಿಸಿದೆ ಎಂದು ಅವರು ಹೇಳಿದರು. ಸುಳ್ಯ ಕೇಂದ್ರ ಕಚೇರಿಯನ್ನು ಹೊಂದಿರುವ ಸಂಘವು ಬೆಳ್ಳಾರೆಯಲ್ಲಿ ಶಾಖೆಯನ್ನು ಹೊಂದಿದೆ, ಇದೀಗ ಎರಡನೇ ಶಾಖೆಯನ್ನು ಈಶ್ವರಮಂಗಲದಲ್ಲಿ ತೆರೆಯಬೇಕೆಂಬ ಉದ್ದೇಶದಿಂದ ಸಮಾಲೋಚನಾ ಸಭೆ ಹಮ್ಮಿಕೊಳ್ಳಲಾಗಿದೆ, ಇಲ್ಲಿ ನಮಗೆ ಉತ್ತಮ ಸ್ಪಂದನೆ ದೊರಕಿದ್ದು ಶೀಘ್ರದಲ್ಲೇ ಶಾಖೆಯನ್ನು ತೆರಯಲಿದ್ದೇವೆ, ಮುಂದಿನ ದಿನಗಳಲ್ಲಿ ಪುತ್ತೂರು, ವಿಟ್ಲ, ಉಪ್ಪಿನಂಗಡಿ ಭಾಗಗಳಲ್ಲೂ ಈ ಸಹಕಾರಿ ಸಂಘದ ಶಾಖೆಗಳನ್ನು ತೆರೆಯುವ ಮೂಲಕ ಅಲ್ಪ ಸಂಖ್ಯಾತ ಸಮುದಾಯದ ಆರ್ಥಿಕ ಕಾರ್ಯಗಳಿಗೆ ಶಕ್ತಿ ತುಂಬುವ ಕಾರ್ಯವನ್ನು ಮಾಡಲಿದ್ದೇವೆ ಎಂದು ಮಹಮ್ಮದ್ ಇಕ್ಬಾಲ್ ಎಲಿಮಲೆ ಹೇಳಿದರು. ಸಂಘದ ನಿರ್ದೇಶಕ ಸಂಶುದ್ದೀನ್ ಎಸ್ ಅರಂಬೂರು ಮಾತನಾಡಿ ಸಂಘವು ಈಗಾಗಲೇ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ವಿಶ್ವಾಸಾರ್ಹ ಸಹಕಾರಿ ಸಂಘವಾಗಿ ಗುರುತಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಕಡೆಗಳಲ್ಲಿ ಇದರ ಶಾಖೆಯನ್ನು ತೆರೆಯುವ ಮೂಲಕ ಸಂಘವನ್ನು ಜಿಲ್ಲೆಯಾದ್ಯಂತ ವಿಸ್ತರಿಸುವ ಯೋಜನೆ ನಮ್ಮದಾಗಿದೆ ಎಂದು ಹೇಳಿದರು. ಕಾವು ಬುಶ್ರಾ ವಿದ್ಯಾ ಸಂಸ್ಥೆಯ ಸಂಚಾಲಕ ಬುಶ್ರಾ ಅಬ್ದುಲ್ ಅಝೀಝ್, ಹಿರಾ ಕಾಂಪ್ಲೆಕ್ಸ್ ಮಾಲಕ ಅಬ್ದುಲ್ ಖಾದರ್ ಹಾಜಿ ಹಿರಾ, ಮಧುರಾ ಇಂಟರ್‌ನ್ಯಾಶನಲ್ ಸ್ಕೂಲ್‌ನ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಹಾಜಿ ಮೇನಾಲ, ನೆ.ಮುಡ್ನೂರು ಗ್ರಾ.ಪಂ ಮಾಜಿ ಸದಸ್ಯ ಖಾದರ್ ಕರ್ನೂರು ಮೊದಲಾದವರು ಮಾತನಾಡಿ ಈಶ್ವರಮಂಗಲದಲ್ಲಿ ಸಹಕಾರಿ ಸಂಘದ ಶಾಖೆ ತೆರೆಯುವುದಕ್ಕೆ ನಮ್ಮ ಬೆಂಬಲ ಮತ್ತು ಸಹಕಾರ ಇದೆ ಎಂದು ಹೇಳಿದರು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಮುಹಿಯುದ್ದೀನ್ ಹಾಜಿ ಕೆ.ಎಂ ನಾವೂರು, ನಿರ್ದೇಶಕರಾದ ಹಸೈನಾರ್ ಎ.ಕೆ ಕಲ್ಲುಗುಂಡಿ, ಜಾರ್ಜ್ ಡಿಸೋಜಾ ಕನಿಕರಪಳ್ಳ, ಇಸ್ಮಾಯಿಲ್ ಕೆ.ಎಂ ಪಡ್ಪಿನಂಗಡಿ, ಆಮಿನಾ ಎಸ್ ಜಯನಗರ, ಜೂಲಿಯಾ ಕ್ರಾಸ್ತ ಬೀರಮಂಗಲ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್ ನಾಯಕ್ ಉಪಸ್ಥಿತರಿದ್ದರು.

Read More
ಕರಾವಳಿ

ಮರಕ್ಕೆ ಸಿಕ್ಕಿಹಾಕಿಕೊಂಡ ರಿಕ್ಷಾ

ವಿಟ್ಲ: ರಸ್ತೆಗೆ ವಾಲಿ ನಿಂತಿದ್ದ ಮರ ಆಟೋ ರಿಕ್ಷಾಕ್ಕೆ ಸಿಕ್ಕಿಹಾಕಿಕೊಂಡ ಘಟನೆ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಥದ ಬೀದಿಯಲ್ಲಿ ನಡೆದಿದೆ. ಅಳಿಕೆ ನಿವಾಸಿಯ ಆಟೋ ರಿಕ್ಷಾ

Read More
ಕರಾವಳಿ

ಸಂಪ್ಯ: ಮೋರಿ ಕಾಮಗಾರಿಯಿಂದ ರಸ್ತೆಯಲ್ಲಿ ಅಪಾಯಕಾರಿ ಹೊಂಡ
ಶಾಸಕರಿಗೆ ದೂರು- ಹೊಂಡ ಮುಚ್ಚುವ ಕಾಮಗಾರಿ ಆರಂಭ

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯ ಅಕ್ಷಯ ಕಾಲೇಜು ಬಳಿ ಹೊಸ ಮೋರಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ನಿರ್ಮಾಣದ ವೇಳೆ ರಸ್ತೆ ಮಧ್ಯೆ ಅಪಾಯಕಾರಿ ಹೊಡ

Read More
ಕರಾವಳಿರಾಜಕೀಯರಾಜ್ಯ

ಸರಕಾರಿ ಸ್ಥಳದಲ್ಲಿರುವ ಪೂಜಾಸ್ಥಳಗಳ ಸಕ್ರಮಕ್ಕೆ ವಿಶೇಷ ಕಾನೂನು ಜಾರಿಗೆ ಆಗ್ರಹ
ಹಿಂದುತ್ವದ ಮೇಲೆ ಅಧಿಕಾರ ಪಡೆದ ಬಿಜೆಪಿ ಮಾಡಿಲ್ಲ, ನಾವು ಮಾಡುತ್ತೇವೆ-ಶಾಸಕ ರೈ

ಪುತ್ತೂರು: ಸರಕಾರಿ ಜಾಗದಲ್ಲಿರುವ ಪೂಜಾ ಸ್ಥಳಗಳಾದ ದೇವಸ್ಥಾನ, ದೈವಸ್ಥಾನ, ಭಜನಾಮಂದಿರ, ಮಸೀದಿ ಮತ್ತು ಚರ್ಚುಗಳನ್ನು ಸಕ್ರಮ ಮಾಡುವ ಮೂಲಕ ಸರಕಾರ ಮತ್ತು ಪೂಜಾಸ್ಥಳದ ಹೆಸರಿನಲ್ಲಿ ಜಂಟಿ ಆರ್‌ಟಿಸಿ

Read More
ಕರಾವಳಿಕ್ರೈಂ

ಉಪ್ಪಿನಂಗಡಿ ಪೊಲೀಸ್ ಠಾಣಾ ಹೆಡ್ ಕಾನ್ಸ್‌ಟೇಬಲ್‌ ಕೃಷ್ಣಪ್ಪ ನಾಯ್ಕ್ ನಿಧನ

ಪುತ್ತೂರು: ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್‌ಟೇಬಲ್‌ ಮಾಣಿ ಸಮೀಪದ ನೇರಳಕಟ್ಟೆ ನಿವಾಸಿ ಕೃಷ್ಣಪ್ಪ ನಾಯ್ಕ್ ಜೆ ಜುಲೈ 12ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೃಷ್ಣಪ್ಪನವರು ಉಪ್ಪಿನಂಗಡಿ

Read More
ಕರಾವಳಿ

ಕಡಬದಲ್ಲಿ ಕೂಡಲೇ ವಿವಿಧ ಇಲಾಖೆಗಳ ಕಚೇರಿಗಳನ್ನು ತೆರೆಯಲು ಒತ್ತಾಯಿಸಿ ಮೀರಾ ಸಾಹೇಬ್ ನೇತೃತ್ವದಲ್ಲಿ ಪ್ರತಿಭಟನೆ

ಕಡಬ ತಾಲೂಕು ರಚನೆ ಆಗಿ 2018ರಲ್ಲಿ ಮಂಜೂರಾತಿ ಆಗಿದ್ದು ಮಿನಿ ವಿಧಾನ ಸೌಧದ ಕಟ್ಟಡ ಪೂರ್ತಿಯಾಗಿದೆ. ಆದರೆ ತಾಲೂಕು ಕಚೇರಿ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು ಉಳಿದ 18 ಕಚೇರಿಗಳು ಇನ್ನೂ ಕಾರ್ಯವೆಸಗದೇ ಇರುವುದರಿಂದ ಕಡಬ ತಾಲೂಕಿನ ಜನತೆ ತೀವ್ರ ತೊಂದರೆಗೆ ಸಿಲುಕಿದ್ದಾರೆ. ಈಗಾಗಲೇ ಅನೇಕ ಮನವಿಗಳನ್ನು ನೀಡಿದ್ದರೂ ಅದಕ್ಕೆ ಸೂಕ್ತ ಸ್ಪಂದನೆ ಸಿಕ್ಕಿಲ್ಲ, ಇದು ನಮ್ಮ ಕೊನೆಯ ಮನವಿಯಾಗಿದ್ದು ಇದಕ್ಕೂ ಸ್ಪಂದನೆ ಸಿಗದೇ ಇದ್ದಲ್ಲಿ ಮುಂದಕ್ಕೆ ಉಗ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕಡಬ ತಾಲೂಕು ಹೋರಾಟ ಸಮಿತಿಯ ಸಂಚಾಲಕರಾದ ಸಯ್ಯದ್ ಮೀರಾ ಸಾಹೇಬ್ ಎಚ್ಚರಿಕೆ ನೀಡಿದ್ದಾರೆ. ಕಡಬ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ಕಡಬ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಜು.11ರಂದು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು ಕಡಬದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಇದ್ದರೂ ಡಯಾಲಿಸಿಸ್ ಹಾಗೂ ವೈದ್ಯರ ಕೊರತೆ ಇದೆ, ಕಡಬದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಇಲ್ಲ, ಸ್ಥಳಾವಕಾಶ ಇದ್ದರೂ ಸಬ್ ರಿಜಿಸ್ಟಾರ್ ಕಚೇರಿ ತೆರೆದಿರುವುದಿಲ್ಲ, ಸಮಾಜ ಕಲ್ಯಾಣ ಇಲಾಖೆ, ಕೃಷಿ ತೋಟಗಾರಿಕೆ, ಪಶು ವೈದ್ಯಕೀಯ, ಅರಣ್ಯ, ಲೋಕೋಪಯೋಗಿ ಇಲಾಖೆ, ಅಲ್ಪಸಂಖ್ಯಾತ, ಹಿಂದುಳಿದ, ಮಹಿಳಾ ಮಕ್ಕಳ ಇಲಾಖೆ, ಅಧಿಕಾರಿಗಳು ಕಾರ್ಯ ನಿರ್ವಹಿಸುವುದಿಲ್ಲ, ಸಾರ್ವಜನಿಕ ಬಸ್‌ಸ್ಟ್ಯಾಂಡ್ ಇಲ್ಲ, ಇಂದಿರಾ ಕ್ಯಾಂಟೀನ್ ಇಲ್ಲ, ಅಗ್ನಿ ಶಾಮಕ ದಳಕ್ಕೆ ಸ್ಥಳ ಕಾಯ್ದಿರಿಸಿದರೂ ಕಾರ್ಯ ನಿರ್ವಹಿಸಲು ಕ್ರಮ ವಹಿಸಿಲ್ಲ, ಅಪ್‌ಗ್ರೇಡ್ ಕಾಲೇಜು ಸ್ಥಾಪನೆ ಆಗಿಲ್ಲ, ಐಟಿಐ, ಪಾಲಿಟೆಕ್ನಿಕ್ ಮುಂತಾದ ವಿದ್ಯಾಭ್ಯಾಸಕ್ಕೂ ಅವಕಾಶವಿಲ್ಲ ಎಂದು ಅವರು ಹೇಳಿದರು. ಕಡಬದಲ್ಲಿ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿ ತೆರೆಯಬೇಕು, ನೆಲ್ಯಾಡಿ ಮತ್ತು ಕಾಣಿಯೂರಲ್ಲಿ ಪೊಲೀಸ್ ಠಾಣೆ ತೆರೆಯಬೇಕು ಎಂದು ಆಗ್ರಹಿಸಿದ ಅವರು ಕಡಬ ತಾಲೂಕಿನಲ್ಲಿ ಅಕ್ರಮ ಸಕ್ರಮ ಮನೆ ನಿವೇಶನ ಹಾಗೂ ಕುಟುಂಬದ ಆಸ್ತಿ ಪಾಲು ಪಟ್ಟಿ ಹಲವಾರು ವರ್ಷ ಕಳೆದರೂ ಕೂಡಾ ಸರ್ವೇ ಪ್ಲಾಟಿಂಗ್ ಆಗುತ್ತಿಲ್ಲ, ಇವೆಲ್ಲದರ ಬಗ್ಗೆ ಸರಕಾರ ಕೂಡಲೇ ಗಮನಹರಿಸಿ ಸೂಕ್ತ ಕ್ರಮ ವಹಿಸಬೇಕು ಎಂದು ಅವರು ಆಗ್ರಹಿಸಿದರು. ನಮ್ಮ ಹಲವು ವರ್ಷಗಳ ಬೇಡಿಕೆಯ ಫಲವಾಗಿ ಸುಮಾರು 42 ಗ್ರಾಮಗಳನ್ನೊಳಗೊಂಡ ಕಡಬ ತಾಲೂಕು ಮಂಜೂರಾಗಿ 5ವರ್ಷವಾದರೂ ಮಿನಿ ವಿಧಾನ ಸೌಧದ ಕಟ್ಟಡ ಪೂರ್ತಿಯಾಗಿ ತಾಲೂಕು ಕಚೇರಿ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ಇಲ್ಲಿ ಈ ವರೆಗೆ ತಾಲೂಕು ಮಟ್ಟದ ವಿವಿಧ ಇಲಾಖಾ ಕಚೇರಿಗಳು ಪ್ರಾರಂಭಗೊಂಡಿಲ್ಲ. ಅಂದಾಜು 5 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಕಡಬ ತಾಲೂಕು ಪಂಚಾಯತ್‌ನಲ್ಲೂ ಹಲವು ಕಚೇರಿಗಳು ಖಾಲಿ ಇದೆ. ಮುಂದಕ್ಕೂ ಇದೇ ಪರಿಸ್ಥಿತಿ ಮುಂದುವರಿದಲ್ಲಿ ಅನಿವಾರ್ಯವಾಗಿ ಧರಣಿ, ಮುಷ್ಕರ, ಬಂದ್ ಮಾಡಲು ನಾವು ಹಿಂಜರಿಯುವುದಿಲ್ಲ ಎಂದು ಮೀರಾ ಸಾಹೇಬ್ ಹೇಳಿದರು. ಪ್ರತಿಭಟನೆಯಲ್ಲಿ ಹಲವಾರು ಮಂದಿ ಭಾಗವಹಿಸಿದ್ದರು. ಪ್ರತಿಭಟನೆ ಬಳಿಕ ಬಳಿಕ ಉಪತಹಸಿಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು

Read More
ಕರಾವಳಿ

ಬಸ್ಕಿ ತೆಗೆದು ವಿದ್ಯಾರ್ಥಿನಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು-ಮುಖ್ಯ ಶಿಕ್ಷಕನ ವಿರುದ್ಧ ದೂರು

ಪುತ್ತೂರು: ತರಗತಿಯಲ್ಲಿ ಪೀಕಲಾಟ ಮಾಡಿದ್ದಾಳೆಂದು ಆರೋಪಿಸಿ ಆರನೇ ತರಗತಿಯ ವಿದ್ಯಾರ್ಥಿನಿಯನ್ನು ಶಿಕ್ಷಕ ಸುಮಾರು ಹೊತ್ತಿನ ತನಕ ಬಸ್ಕಿ ತೆಗೆಸಿದ್ದು ಅಸ್ವಸ್ಥ ವಿದ್ಯಾರ್ಥಿನಿಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾವು ಮಾಡ್ನೂರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಈ ಘಟನೆ ನಡೆದಿದ್ದು ಶಾಲೆಯ ಪ್ರಭಾರ ಮುಖ್ಯಗುರು ವಿದ್ಯಾರ್ಥಿನಿಯನ್ನು ಬಸ್ಕಿ ತೆಗೆಯುವಂತೆ ಎಚ್ಚರಿಸಿದ್ದರು ಎನ್ನಲಾಗಿದೆ. ಸುಮಾರು ಹೊತ್ತಿನ ಬಳಿಕ ಬಸ್ಕಿ ತೆಗೆದ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದಳು. ತಕ್ಷಣ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಸ್ಕಿ ತೆಗೆಸಿದ ಪ್ರಭಾರ ಮುಖ್ಯಗುರುಗಳ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಶಾಸಕರಿಗೆ ಪೋಷಕರು ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.

Read More
ಕರಾವಳಿ

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸುಳ್ಯಕ್ಕೆ ಭೇಟಿ

ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸುಳ್ಯ ತಾಲೂಕು ಕಚೇರಿಗೆ ಜು.12ರಂದು ಭೇಟಿ ನೀಡಿದ್ದಾರೆ. ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಸುಳ್ಯ ತಾಲೂಕಿಗೆ ಆಗಮಿಸಿದ ಅವರು

Read More
ಕರಾವಳಿರಾಜಕೀಯ

ರಾಹುಲ್ ಗಾಂಧಿ ವಿರುದ್ದ ಷಡ್ಯಂತ್ರ ಆರೋಪ- ಪುತ್ತೂರಿನಲ್ಲಿ ಬಿಜೆಪಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಪುತ್ತೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ಅನೂರ್ಜಿತಗೊಳಿಸಲು ಹುನ್ನಾರ ನಡೆಯುತ್ತಿದೆ ಎಂದು ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಪುತ್ತೂರು, ವಿಟ್ಲ,

Read More
ಕರಾವಳಿ

ಶಾಸಕಿ ಭಾಗೀರಥಿ ಮುರುಳ್ಯರವರಿಗೆ ಸುಳ್ಯ ಟೈಲರ್ ಅಸೋಸಿಯೇಷನ್ ವತಿಯಿಂದ ಸನ್ಮಾನ

ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಟೈಲರ್ ಅಸೋಸಿಯೇಷನ್ಇದರ ವಾರ್ಷಿಕ ಮಹಾಸಭೆಯು ಜು.9 ರಂದು ಕ್ಷೇತ್ರದ ಅಧ್ಯಕ್ಷರಾದ ದಿವಾಕರ ಟಿ. ಇವರ ಅಧ್ಯಕ್ಷತೆಯಲ್ಲಿ ಸುಳ್ಯ ಶಿವಕೃಪಾ ಕಲಾಮಂದಿರದಲ್ಲಿ ನಡೆಯಿತು.

Read More
error: Content is protected !!