ಕರಾವಳಿ

Uncategorizedಕರಾವಳಿ

ಸೂರಿಕುಮೇರು: ದ್ವಿಚಕ್ರ ವಾಹನ ಸ್ಕಿಡ್ ಆಗಿ ಜವುಳಿ ವ್ಯಾಪಾರಸ್ಥ ಅಬ್ದುಲ್ ಖಾದರ್ ಮೃತ್ಯು

ಬಂಟ್ವಾಳ: ಸೂರಿಕುಮೇರಿನಲ್ಲಿ ಅ.28ರಂದು ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಾಣೆಮಂಗಳೂರು ಸಮೀಪದ ನರಿಕೊಂಬು ಗ್ರಾಮದ ಉಪ್ಪುಗುಡ್ಡೆ ನಿವಾಸಿ, ಜವುಳಿ ವ್ಯಾಪಾರಸ್ಥ ಅಬ್ದುಲ್ ಖಾದರ್ ಅವರು

Read More
ಕರಾವಳಿ

ದೇರಳಕಟ್ಟೆಯಲ್ಲಿ ರಸ್ತೆ ಅಪಘಾತ: ವಿಟ್ಲ ನಿವಾಸಿ ಶಿಕ್ಷಕ ಮೃತ್ಯು

ವಿಟ್ಲ: ದೇರಳಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ವಿಟ್ಲ ನಿವಾಸಿಯೋರ್ವರು ಮೃತಪಟ್ಟಿದ್ದಾರೆ. ಮೃತರನ್ನು ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ಶಿಕ್ಷಕರಾದ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.

Read More
ಕರಾವಳಿ

ನ.1: ಕಾಮಧೇನು ಚಾರಿಟೇಬಲ್ ಟ್ರಸ್ಟ್ ವತಿಯಿಂದ 20ಕ್ಕೂ ಅಧಿಕ ರಿಕ್ಷಾ ನಿಲ್ದಾಣದಲ್ಲಿ ಕಾರ್ಯಕ್ರಮ: ಹಿರಿಯ ಸಾಧಕರಿಗೆ ಸನ್ಮಾನ

ಪುತ್ತೂರು: ಕಾಮಧೇನು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ರಿಕ್ಷಾ ಚಾಲಕ, ಮಾಲಕರಿಗೆ ರಸ ಪ್ರಶ್ನೆ ಹಾಗೂ ಸ್ಥಳದಲ್ಲೇ ಬಹುಮಾನ ವಿತರಣೆ ಮತ್ತು ಹಿರಿಯ ಸಾಧಕರಿಗೆ

Read More
ಕರಾವಳಿ

ಪುತ್ತೂರಿನ ಆಸ್ಕೋ ಹೋಮ್ ಅಪ್ಲಯನ್ಸಸ್‌ನಲ್ಲಿ ಸೀಮಿತ ಅವಧಿಯ ಆಫರ್

ಪುತ್ತೂರು: ಇಲ್ಲಿನ ಜೋಸ್ ಆಲುಕ್ಕಾಸ್ ಚಿನ್ನದ ಮಳಿಗೆ ಪಕ್ಕದಲ್ಲಿ ಕಾರ್ಯಾಚರಿಸುತ್ತಿರುವ ಆಸ್ಕೋ ಹೋಂ ಅಪ್ಲಯನ್ಸಸ್‌ನಲ್ಲಿ ಗೃಹೋಪಯೋಗಿ ವಸ್ತುಗಳ ಖರೀದಿಗೆ ಸೀಮಿತ ಅವಧಿಯ ಆಫರ್ ಘೋಷಿಸಲಾಗಿದೆ. ವಾಷಿಂಗ್ ಮೆಷಿನ್, ಎ.ಸಿ, ರೆಫ್ರಿಜರೇಟರ್, ಟಿ.ವಿ, ಕೂಲರ್, ಫ್ಯಾನ್ ಮತ್ತಿತರ ಎಲೆಕ್ಟ್ರೋನಿಕ್ಸ್ ಐಟಂಗಳನ್ನು ಖರೀದಿಸುವ ಗ್ರಾಹಕರಿಗೆ ವಿಶೇಷ ಗಿಫ್ಟ್ ನೀಡಲಾಗುತ್ತದೆ. ಮಿಕ್ಸರ್ ಗ್ರೈಂಡರ್, ಕುಕ್ಕರ್ ಮೊದಲಾವುಗಳ ಮೇಲೆ 30% ಡಿಸ್ಕೌಂಟ್ ಆಫರ್ ಪ್ರಕಟಿಸಲಾಗಿದೆ. ವಿವಿಧ ಬಗೆಯ ಸ್ಟೀಲ್ ಪಾತ್ರೆಗಳು ಲಭ್ಯವಿದ್ದು ರೂ.5000/-ಕ್ಕಿಂತ ಮೇಲ್ಪಟ್ಟ ಖರೀದಿಗೆ ಉಚಿತ ಗಿಫ್ಟ್ ನೀಡಲಾಗುತ್ತದೆ. ಈ ಎಲ್ಲಾ ಆಫರ್ ನವೆಂಬರ್ 5ರ ವರೆಗೆ ಮಾತ್ರ ಇರಲಿದೆ. ಎಲ್ಲ ವಿಧದ ಎಲೆಕ್ಟ್ರೋನಿಕ್ಸ್ ಹಾಗೂ ಫರ್ನಿಚರ‍್ಸ್ ಐಟಂಗಳು ಒಂದೇ ಸೂರಿನಡಿಯಲ್ಲಿ ಲಭ್ಯವಿದ್ದು ಗ್ರಾಹಕರಿಗೆ ಸುಲಭ ಕಂತುಗಳಲ್ಲಿ ಖರೀದಿಸುವ ಅವಕಾಶವನ್ನೂ ಸಂಸ್ಥೆ ಒದಗಿಸುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಮೊ 8971301786, 8971461786, 9008341786 ನಂಬರನ್ನು ಸಂಪರ್ಕಿಸಬಹುದಾಗಿದೆ ಎಂದು ಆಸ್ಕೋ ಮಳಿಗೆಯ ಮಾಲಕರು ತಿಳಿಸಿದ್ದಾರೆ.

Read More
ಕರಾವಳಿರಾಜಕೀಯರಾಜ್ಯ

ಪುತ್ತೂರು: ಕಾಂಗ್ರೆಸ್ ನಾಯಕಿ ವಿರುದ್ಧ ಫೇಸ್‌ಬುಕ್‌ನಲ್ಲಿ ಅಶ್ಲೀಲ ಕಮೆಂಟ್: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು: ಕೆಪಿಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ ವೀಣಾ ಪಿ ಭಟ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ವ್ಯಕ್ತಿಯನ್ನು ಪೊಲಿಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಫೇಸ್‌ಬುಕ್‌ನಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ವ್ಯಕ್ತಿಯ ಕುರಿತು ವೀಣಾ ಪಿ ಭಟ್ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಭಾಸ್ಕರ ಮಣಿಯಾಣಿ ಎಂಬವರು ವೀಣಾ ಪಿ ಭಟ್‌ರವರ ಬಗ್ಗೆ ಆಕ್ಷೇಪಾರ್ಹ ಅಶ್ಲೀಲ ಮತ್ತು ಮಾನಹಾನಿಕರ ಕಮೆಂಟ್ ಫೇಸ್‌ಬುಕ್‌ನಲ್ಲಿ ಹಾಕಿದ್ದರು. ಈ ಬಗ್ಗೆ ಪೊಲಿಸರಿಗೆ ದೂರು ನೀಡಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಫೇಸ್‌ಬುಕ್‌ನಲ್ಲಿ ಹಾಕಿರುವ ಕಮೆಂಟ್‌ನ್ನು ಅಳಿಸಿ ಹಾಕಿಸಿದ್ದಾರೆ. ಬಳಿಕ ಆರೋಪಿ ಮತ್ತು ದೂರುದಾರ ವೀಣಾ ಪಿ ಭಟ್‌ರವರ ಸಮಕ್ಷಮ ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದು ಆರೋಪಿ ಕ್ಷಮೆ ಕೇಳಿದ ಬಳಿಕ ಪ್ರಕಣವನ್ನು ಇತ್ಯರ್ಥಪಡಿಸಲಾಗಿದೆ ಎಂದು ವೀಣಾ ಪಿ ಭಟ್ ತಿಳಿಸಿದ್ದಾರೆ.

Read More
ಕರಾವಳಿ

ಸಾವಿನಲ್ಲೂ ಸಾರ್ಥಕತೆ ಮೆರೆದ ಕುಂಬ್ರದ ಆಟೋ ರಿಕ್ಷಾ ಚಾಲಕ:
ಅಂಗಾಂಗ ದಾನ

ಪುತ್ತೂರು: ಒಳಮೊಗ್ರು ಗ್ರಾಮದ ನಾಣಿಲತ್ತಡ್ಕ ನಿವಾಸಿ ಕುಂಬ್ರದಲ್ಲಿ ರಿಕ್ಷಾ ಚಾಲಕರಾಗಿದ್ದ ಐತ್ತಪ್ಪ ಯಾನೆ ಅಣ್ಣು ಪೂಜಾರಿ(54.ವ)ಯವರು ಅ.29 ರಂದು ನಿಧನರಾಗಿದ್ದು ಮೃತರ ಅಂಗಾಂಗ ದಾನ ಮಾಡುವ ಮೂಲಕ

Read More
ಕರಾವಳಿ

ಪುತ್ತೂರು: ದರ್ಬೆ ಯುನೈಟೆಡ್ ಹೋಂ ಡೆಕೋರ್‌ನಲ್ಲಿ ಮೆಗಾ ಸ್ಟಾಕ್ ಕ್ರಿಯರೆನ್ಸ್ ಸೇಲ್

ಪುತ್ತೂರು: ದರ್ಬೆ ಸರ್ಕಲ್ ಬಳಿ ಕಾರ್ಯಾಚರಿಸುತ್ತಿರುವ ಯುನೈಟೆಡ್ ಹೋಂ ಡೆಕೋರ್ ಗೃಹೋಪಯೋಗಿ ವಸ್ತುಗಳ ಮಳಿಗೆಯು ೪ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿರುವ ಹಿನ್ನೆಲೆಯಲ್ಲಿ ‘ಮೆಗಾ ಸ್ಟಾಕ್ ಕ್ರಿಯರೆನ್ಸ್ ಸೇಲ್’ 50% ಡಿಸ್ಕೌಂಟ್ ಆಫರ್ ಅ.15ರಂದು ಪ್ರಾರಂಭಗೊಂಡಿದ್ದು ನ.5ರ ವರೆಗೆ ಮಾತ್ರ ಈ ಆಫರ್ ಲಭ್ಯವಿದೆ.  ಗೃಹೋಪಯೋಗಿ ವಸ್ತುಗಳಾದ ಸೋಫಾ ಸೆಟ್, ಕಪಾಟು, ಡೈನಿಂಗ್ ಟೇಬಲ್, ಟೀ ಟೇಬಲ್, ವಾಲ್ ಕ್ಲಾಕ್, ಆಫೀಸ್ ಚೆಯರ್, ಆಫೀಸ್ ಟೇಬಲ್, ಡೆಕ್ಕನ್ ಚೆಯರ್, ಬೆಡ್ ಹಾಗೂ ಇನ್ನಿತರ ನವನವೀನ ಮಾದರಿಯ ಆಧುನಿಕ ಶಯಲಿಯ ಗೃಹೋಪಯೋಗಿ ಪೀಠೋಪಕರಣಗಳು ಹಾಗೂ ನಾನಾ ತರದ ಆಧುನಿಕ ಶೈಲಿಯ ಗೃಹೋಪಯೋಗಿ ವಸ್ತುಗಳು ಲಭ್ಯವಿದೆ. ಗೃಹೋಪಯೋಗಿ ಐಟಂಗಳನ್ನು ಇಎಂಐ ಮೂಲಕ ಸುಲಭ ಕಂತುಗಳಲ್ಲಿ ಖರೀದಿಸಲು ಅವಕಾಶ ಕಲ್ಪಿಸಲಾಗಿದ್ದು ಗ್ರಾಹಕರು ತಮ್ಮ ಮನದಿಚ್ಚೆಯ ಐಟಂಗಳನ್ನು ಸಲುಭವಾಗಿ ಕನಿಷ್ಠ ಮೊತ್ತ ಪಾವತಿಸಿ ಖರೀದಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ:8971658065 ನಂಬರನ್ನು ಸಂಪರ್ಕಿಸಬಹುದಾಗಿದೆ ಎಂದು ಯುನೈಟೆಡ್ ಹೋಂ ಡೆಕೋರ್‌ನ ಮಾಲಕರು ತಿಳಿಸಿದ್ದಾರೆ

Read More
ಕರಾವಳಿ

ಕಾಣಿಯೂರು ಗುಂಪು ಹಲ್ಲೆ ಮಾನವೀಯತೆಯ ಕಗ್ಗೊಲೆ-ಅನೀಸ್ ಕೌಸರಿ

ಪುತ್ತೂರು:ಜಿಲ್ಲೆಯ ಕೋಮುವಾದಿ ಶಕ್ತಿಗಳ ಮನುಷ್ಯತ್ವ ವಿರೋಧೀ ನಡೆಯಿಂದ ದೇಶವೇ ತಲೆ ತಗ್ಗಿಸುವಂತೆ ಆಗಿದ್ದು ಜಿಲ್ಲೆಗೆ ಮುಖ್ಯಮಂತ್ರಿಗಳು ಬಂದು ಹೋದ ಬಳಿಕ ಅಶಾಂತಿ ಹೆಚ್ಚುತ್ತಿದೆ. ಪರಸ್ಪರ ಧರ್ಮ ನೋಡಿ ಹಲ್ಲೆಗಳು ನಡೆಯುತ್ತಿದೆ ಇದಕ್ಕೆ ಮುಖ್ಯಮಂತ್ರಿಗಳ ಕ್ರಿಯೆಗೆ ಪ್ರತಿಕ್ರಿಯೆ ಹೇಳಿಕೆಯೇ ಕಾರಣವಾಗಿದೆ ಎಂದು ಎಸ್ಕೆಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಅನೀಸ್ ಕೌಸರಿ ಹೇಳಿದರು.  ಕಾಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಬ್ಬರ ಮೇಲೆ ಅಮಾನುಷ ಗುಂಪು ಹಲ್ಲೆ ನಡೆಸಿದರ ವಿರುದ್ಧ ನ್ಯಾಯಕ್ಕಾಗಿ ಆಗ್ರಹಿಸಿ ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ಆಶ್ರಯದಲ್ಲಿ ಅ.28ರಂದು ಸಂಜೆ ಪುತ್ತೂರು  ಕಿಲ್ಲೆ ಮೈದಾನದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಮುಸ್ಲಿಮರಿಗೊಂದು ನ್ಯಾಯ ಹಿಂದುಗಳಿಗೊಂದು ನ್ಯಾಯ ನೀಡುವ ಮೂಲಕ ಸಹೋದರರಂತೆ ಬಾಳುತ್ತಿದ್ದ ಸಮುದಾಯಗಳ ನಡುವೆ ವಿಷ ಬೀಜ ಬಿತ್ತುವ ಕೆಲಸವನ್ನು ಸರಕಾರವೇ ಮಾಡುತ್ತಿದೆ. ಕಾಣಿಯೂರಿನಲ್ಲಿ ನಡೆದ ಗುಂಪು ಹಲ್ಲೆ ಕೃತ್ಯ ಮಾನವೀಯತೆಯ ಕಗ್ಗೊಲೆಯಾಗಿದೆ. ಈ ಪ್ರತಿಭಟನೆ ಆರಂಭಿಕ ಹಂತವಾಗಿದ್ದು ನ್ಯಾಯ ಸಿಗದಿದ್ದಲ್ಲಿ ಇನ್ನೊಂದು ಹಂತದಲ್ಲಿ ಯಾವ ರೀತಿಯ ಹೋರಾಟ ಮಾಡಬೇಕೆನ್ನುವುದು ನಮಗೆ ಗೊತ್ತಿದೆ ಎಂದು ಅವರು ಹೇಳಿದರು.  ಕಾಣಿಯೂರಿನಂತಹ ಹಲ್ಲೆ ಘಟನೆ ವಿರುದ್ಧ ಹಿಂದೂ ಸಮಾಜದ ಧರ್ಮಗುರುಗಳು ಧ್ವನಿ ಎತ್ತಬೇಕಾಗಿದ್ದು ನಮ್ಮ ಸಮುದಾಯದವರು ಆ ರೀತಿಯ ಕೃತ್ಯ ಎಲ್ಲಿಯಾದರೂ ಮಾಡಿದ್ದಲ್ಲಿ ಸಾವಿರಾರು ಉಲಮಾಗಳು ಅದರ ವಿರುದ್ಧ ಮಾತನಾಡುತ್ತಿದ್ದರು ಎಂದ ಅನೀಸ್ ಕೌಸರಿಯವರು ರಾಜ್ಯದ ಪತ್ರಿಕಾ ಮಾಧ್ಯಮಗಳೂ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ. ಕೋಮು ವಿಷಬೀಜ ಬಿತ್ತುವವರ ಮೇಲೆ ಪೊಲೀಸರು ಯಾಕೆ ಕೇಸು ದಾಖಲಿಸುತ್ತಿಲ್ಲ ಎಂದು ಅವರು ಪ್ರಶ್ನೆ ಮಾಡಿದರು.

Read More
ಕರಾವಳಿ

‘ಸ್ವಚ್ಛ ವಾಹಿನಿ ಸಾರಥಿ’ ಪೆರುವಾಯಿ ಗ್ರಾ.ಪಂ ಉಪಾಧ್ಯಕ್ಷೆ ನಫೀಸಾರವರಿಗೆ ಕಾವು ಹೇಮಾನಾಥ ಶೆಟ್ಟಿ ನೇತೃತ್ವದಲ್ಲಿ ಸನ್ಮಾನ

ಪುತ್ತೂರು: ಪೆರುವಾಯಿ ಗ್ರಾಮ ಪಂಚಾಯತ್ ನಲ್ಲಿ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಚಾಲಕರಿಲ್ಲದ ಸಂದರ್ಭದಲ್ಲಿ ಸ್ವತಃ ತಾನೇ ವಾಹನ ಚಲಾಯಿಸಿ ‘ಸ್ವಚ್ಛ ವಾಹಿನಿ ಸಾರಥಿ’ಯಾಗಿ ಗುರುತಿಸಿಕೊಂಡು ರಾಜ್ಯದಲ್ಲಿ ಸುದ್ದಿಯಾಗಿ

Read More
ಕರಾವಳಿ

ಜಯನಗರ: ಈದ್ ಮೀಲಾದ್ ಆಚರಣೆ ಮತ್ತು 5ನೇ ವರ್ಷದ ಅಜ್ಮೀರ್ ವಾರ್ಷಿಕ ಮೌಲಿದ್

ಜಯನಗರ ಜನ್ನತುಲ್ ಉಲೂಮ್ ಮಸ್ಜಿದ್ ಮತ್ತು ಮದರಸ ಕಮಿಟಿ ಆಶ್ರಯದಲ್ಲಿ ಈದ್ ಮಿಲಾದ್ ಆಚರಣೆ ಮತ್ತು ಐದನೆಯ ವರ್ಷದ ಅಜ್ಮೀರ್ ವಾರ್ಷಿಕ ಮೌಲಿದ್ ಕಾರ್ಯಕ್ರಮ ಅಕ್ಟೋಬರ್ 26ರಂದು

Read More
error: Content is protected !!