ಜಿಲ್ಲೆ

ಕರಾವಳಿಜಿಲ್ಲೆ

ಮಾಡಾವು: ತಾಯಿ, ಮಗಳು ಸಂಕಷ್ಟದಲ್ಲಿ ವಾಸ್ತವ್ಯಕ್ಕೆ ಮನೆಯೇ ಇಲ್ಲ…!

ಪುತ್ತೂರು; ಸೊಂಟದ ಬಲ ಕಳೆದುಕೊಂಡು ತೆವಳುತ್ತಲೇ ಮನೆಯೊಳಗೆ ಅತ್ತಿಂದಿತ್ತ ತೆರಳುವ ಪುತ್ರಿ. ವಯೋಸಹಜವಾಗಿ ಕೆಲಸಕ್ಕೆ ತೆರಳಲು ಸಾಧ್ಯವಾಗದೇ ಮನೆಯಲ್ಲೇ ಇರುವ ತಾಯಿ. ಇವರಿಗೆ ವಾಸ್ತವ್ಯಕ್ಕೆ ಸ್ವಂತ ಮನೆಯಿಲ್ಲ. ಪಂಚಾಯಿತಿಗೆ ಸೇರಿದ ಹಳೆಯ ಕಟ್ಟಡವೊಂದರಲ್ಲೇ ಕಳೆದ ಹತ್ತು ವರ್ಷಗಳಿಂದ ದಿನದೂಡುತ್ತಿರುವ ಈ ಕುಟುಂಬದ ಕಣ್ಣೀರು ಒರೆಸುವ ಕಾರ್ಯ ನಡೆಯಬೇಕಿದೆ. ಕೆಯ್ಯೂರು ಗ್ರಾಮದ ಮಾಡಾವು ಕಟ್ಟೆಯ ಬಳಿ ಸೀತಮ್ಮ (85) ಹಾಗೂ 55 ವರ್ಷ ಪ್ರಾಯದ ಪುತ್ರಿ ಬೇಬಿ ಕುಟುಂಬದ ಕರುಣಾಜನಕ ಬದುಕು ನೋಡಿದವರ ಕಣ್ಣನ್ನು ತೇವಗೊಳಿಸದೆ ಇರದು. ತಾಯಿ ಮಗಳಿಬ್ಬರ ನೋವನ್ನು ಆಲಿಸುವವರೇ ಇಲ್ಲದಂತ ಪರಿಸ್ಥಿತಿ. ಸೀತಮ್ಮರ ಓರ್ವ ಪುತ್ರನ ಆರೋಗ್ಯವೂ ಸರಿಯಾಗಿಲ್ಲ. ಸೀತಮ್ಮ ಕುಟುಂಬಕ್ಕೆ ಆದಾಯ ಎಂಬುದೇ ಇಲ್ಲ. ಯಾರಾದರೂ ಸಹಾಯ ಮಾಡಿದರೆ ಒಂದು ಹೊತ್ತಿನ ಊಟ ಇಲ್ಲದೇ ಇದ್ದರೆ ಉಪವಾಸವೇ ಗತಿ ಎಂಬಂತಿದೆ. ಮನೆಯಿಲ್ಲದ ಕಾರಣಕ್ಕೆ ಇವರಿಗೆ ಪಡಿತರ ಕಾರ್ಡು ಇಲ್ಲ, ಆಧಾರ್ ಕಾರ್ಡು ಇಲ್ಲ. ವೋಟರ್ ಐಡಿಯೂ ಇಲ್ಲ. ಇವರ ಹೆಸರಿಗೆ ಒಂದು ಸೆಂಟ್ಸ್ ಭೂಮಿಯೂ ಇಲ್ಲದ ಕಾರಣ ಇವರಿಗೆ ಯಾವುದೇ ದಾಖಲೆಯನ್ನು ಮಾಡಿಸಲು ಸಾಧ್ಯವಾಗಿಲ್ಲ. ಸರಕಾರ ವರ್ಷದಿಂದ ವರ್ಷಕ್ಕೆ ಬಡವರ ಉದ್ದಾರಕ್ಕೆಂದು ಅನುದಾನವನ್ನು ನೀಡುತ್ತಿದೆ. ಈ ಅನುದಾನ ಗ್ರಾಪಂ ಮೂಲಕ ವಿತರಣೆಯಾಗುತ್ತದೆ. ಸೀತಮ್ಮ ಕುಟುಂಬಕ್ಕೆ ಮನೆ ನೀಡಲು ಗ್ರಾಪಂಗೆ ಮನಸ್ಸಿದ್ದರೂ ಯಾವುದೇ ದಾಖಲೆ ಇಲ್ಲದ ಕಾರಣ ಮನೆ ನೀಡಲು ಕಾನೂನಿನ ತೊಡಕಾಗಿದೆ. ಸೀತಮ್ಮ ಕುಟುಂಬದ ಸಂಕಷ್ಟವನ್ನು ಕಂಡು ಅನೇಕ ಮಂದಿ ಸಹಾಯ ಮಾಡಿದ್ದಾರೆ, ಮಾಡುತ್ತಲೇ ಇದ್ದಾರೆ. ಆದರೆ ಇವೆಲ್ಲ ಎಚ್ಟು ದಿನ ಎಂಬುದೇ ಈಗ ಕಾಡುತ್ತಿರುವ ಪ್ರಶ್ನೆ. ಸಂಬಂಧಿಸಿದ ಇಲಾಖೆ ಇವರಿಗೊಂದು ನಿವೇಶನ ಮಂಜೂರು ಮಾಡುವ ಮೂಲಕ ಇವರಿಗೊಂದು ಸೂರು ಕಲ್ಪಿಸಬೇಕಿದೆ, ಜೊತೆಗೆ ಸಂಘಟನೆಗಳ ಸಹಾಯ ಹಸ್ತವೂ ಬೇಕಾಗಿದೆ.

Read More
ಕರಾವಳಿಜಿಲ್ಲೆರಾಜ್ಯರಾಷ್ಟ್ರೀಯ

ಮೈಸೂರಿಗೆ ಎಂಟ್ರಿ ಕೊಟ್ಟ ಭಾರತ್ ಜೋಡೋ ಪಾದಯಾತ್ರೆ

ಮೈಸೂರು: ಎರಡನೇ ದಿನವಾದ ಭಾರತ್ ಜೋಡೊ ಪಾದಯಾತ್ರೆಯು ಮೈಸೂರು ಜಿಲ್ಲೆ ಪ್ರವೇಶಿಸಿದೆ. ಗುಂಡ್ಲುಪೇಟೆ ತಾಲ್ಲೂಕಿನ ತೊಂಡವಾಡಿ ಗ್ರಾಮದಿಂದ ರಾಹುಲ್ ಗಾಂಧಿ ಜೊತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ

Read More
ಕರಾವಳಿಜಿಲ್ಲೆರಾಜಕೀಯರಾಜ್ಯ

ಹೇಮನಾಥ ಶೆಟ್ಟಿ ಹೆಗಲಿಗೆ ಕೈ ಇಟ್ಟು ಮಾತನಾಡಿಸಿದ ಡಿಕೆಶಿ..!!

ಪುತ್ತೂರು: ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.‌ ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮದ ಮಧ್ಯೆ

Read More
ಕರಾವಳಿಜಿಲ್ಲೆರಾಜ್ಯ

‘ಭಾರತ್ ಜೋಡೋ’ ಭಾರತ ಐಕ್ಯತಾ ಯಾತ್ರೆಯ ಸಂಯೋಜಕಿ ದಿವ್ಯಪ್ರಭಾ ಗೌಡರವರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ

ಪುತ್ತೂರು: ‘ಭಾರತ್ ಜೋಡೋ’ ಭಾರತ ಐಕ್ಯತಾ ಯಾತ್ರೆಯ ಸಂಯೋಜಕರಾದ ದಿವ್ಯಪ್ರಭಾ ಗೌಡ ಚಿಲ್ತಡ್ಕ ಅವರು ಸೆ.25ರಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರನ್ನು ಬೆಂಗಳೂರು ಸದಾಶಿವ ನಗರದಲ್ಲಿರುವ

Read More
Uncategorizedಕರಾವಳಿಜಿಲ್ಲೆ

ಈಶ್ವರಮಂಗಲ: ‘ಇಲಲ್ ಮದೀನಾ ಸ್ಕ್ವಯರ್’ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಉಮರ್ ಜಿಫ್ರಿ ತಂಗಳ್ ಆಯ್ಕೆ

ಪುತ್ತೂರು: ತ್ವೈಬ ಎಜುಕೇಶನ್ ಸೆಂಟರ್‌ನಲ್ಲಿ ಪ್ರತಿ ವರ್ಷ ನಡೆಸಿಕೊಂಡು ಬರುವ ಇಲಲ್ ಮದೀನ ಸ್ಕ್ವಯರ್ ಮೀಲಾದ್ ಕಾರ್ಯಕ್ರಮ ಈ ವರ್ಷವೂ ನಡೆಸುವುದಕ್ಕಾಗಿ ಸ್ವಾಗತ ಸಮಿತಿ ರಚಿಸಲಾಯಿತು. ಮೀಲಾದ್

Read More
ಕರಾವಳಿಜಿಲ್ಲೆ

ಬಂಟ್ವಾಳ: ಭಾರೀ ಮಳೆಯಿಂದ ಹಾನಿಗೀಡಾದ ಮನೆಗೆ 50 ಸಾವಿರ ರೂ. ನೆರವು

ಪುತ್ತೂರು: ಭಾರೀ ಮಳೆಯಿಂದಾಗಿ ಹಾನಿಗೀಡಾದ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾ.ಪಂ ವ್ಯಾಪ್ತಿಯ ಮನೆಗೆ ರೂ.50 ಸಾವಿರ ಮೊತ್ತವನ್ನು ಪೆರುವಾಯಿ ಗ್ರಾ.ಪಂ ಉಪಾಧ್ಯಕ್ಷೆ ನಫೀಸಾರವರ ಮನವಿಯ ಮೇರೆಗೆ ಶಾಸಕ ಜಮೀರ್ ಅಹ್ಮದ್ ಅವರು ನೀಡಿದ್ದಾರೆ.  ಜಮೀರ್ ಅಹ್ಮದ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾದ ನಫೀಸಾರವರು ಮಳೆಯಿಂದ ಮನೆ ಹಾನಿಯಾಗಿರುವ ಬಗ್ಗೆ ಮಾಹಿತಿ ನೀಡಿ ಪರಿಹಾರ ಒದಗಿಸುವಂತೆ ಕೇಳಿಕೊಂಡಿದ್ದು ಇದಕ್ಕೆ ತಕ್ಷಣ ಸ್ಪಂಧಿಸಿದ ಜಮೀರ್ ಅಹ್ಮದ್ ಅವರು ರೂ.50 ಸಾವಿರ ನಗದು ಮೊತ್ತವನ್ನು ನೀಡಿದರು. ಗ್ರಾ.ಪಂ ಸದಸ್ಯೆ ರಶ್ಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More
ಕರಾವಳಿಜಿಲ್ಲೆ

ಮಂಗಳೂರು: ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ..!

ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಮೂವರು ವಿದ್ಯಾರ್ಥಿನಿಯರು ಮಂಗಳೂರು ರೈಲು ನಿಲ್ದಾಣ ಮೂಲಕ ಕೊಯಂಬತ್ತೂರಿಗೆ ಪ್ರಯಾಣಿಸಿರುವ ಬಗ್ಗೆ

Read More
ಕರಾವಳಿಜಿಲ್ಲೆ

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಹಿನ್ನೆಲೆ-ಸರ್ವೆ ವಲಯ ಕಾಂಗ್ರೆಸ್ ಸಮಾಲೋಚನಾ ಸಭೆ

ಪುತ್ತೂರು: ಕನ್ಯಾಕುಮಾರಿಯಿಂದ ಪ್ರಾರಂಭಗೊಂಡು ಕಾಶ್ಮೀರದ ತನಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ದಿನಾಂಕ 30 ರಂದು ಕರ್ನಾಟಕ ಪ್ರವೇಶಿಸಲಿದ್ದು ಆ ಪ್ರಯುಕ್ತ ಸರ್ವೆ

Read More
ಕರಾವಳಿಜಿಲ್ಲೆರಾಜ್ಯ

ದೇಶಾದ್ಯಂತ PFI, SDPI ಮುಖಂಡರ ಮನೆ, ಕಚೇರಿಗೆ NIA, ED ದಾಳಿ

ನವದೆಹಲಿ: ರಾಷ್ಟ್ರೀಯ ತನಿಖಾ ದಳ ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು ಹಾಗೂ ಇತರ ರಾಜ್ಯಗಳ ಪಿಎಫ್

Read More
ಕರಾವಳಿಜಿಲ್ಲೆ

ಮಾಡನ್ನೂರು ನೂರುಲ್ ಹುದಾದಲ್ಲಿ
‘ಲೀಡರ‍್ಸ್ ಸಮ್ಮಿಟ್’

ಪುತ್ತೂರು: ಪರಿಶುದ್ಧ ಇಸ್ಲಾಂ ಧರ್ಮವು ಎಂದಿಗೂ ಅಸಹಿಷ್ಣತೆಯನ್ನು ಸಹಿಸದ ಧರ್ಮವಾಗಿದೆ ಎಂದು ಪಾಣಕ್ಕಾಡ್ ಅಸ್ಸಯ್ಯದ್ ಅಬ್ಬಾಸ್ ಅಲಿ ಶಿಹಾಬ್ ತಂಙಳ್ ಹೇಳಿದರು. ಮಾಡನ್ನೂರು ನೂರುಲ್ ಹುದಾ ಪ್ರಚಾರ ಅಭಿಯಾನದ ಅಂಗವಾಗಿ ಅಕಾಡೆಮಿಯ ಕ್ಯಾಂಪಸ್‌ನಲ್ಲಿ ನಡೆದ ಲೀಡರ‍್ಸ್ ಸಮ್ಮಿಟ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ನೂರುಲ್ ಹುದಾ ವಿದ್ಯಾಸಂಸ್ಥೆ ಬರೀ ಏಳು ವರ್ಷಗಳಲ್ಲಿ ಎಲ್ಲರ ಗಮನ ಸೆಳೆದಿದ್ದು ಮುಂದಕ್ಕೆ ಈ ಸಂಸ್ಥೆಯನ್ನು ಇನ್ನಷ್ಟು ಶಕ್ತಿಯುತವಾಗಿ ಬೆಳೆಸಲು ಎಲ್ಲರೂ ಸಹಕಾರ ನೀಡಬೇಕೆಂದು ಅವರು ಹೇಳಿದರು. ಸಂಸ್ಥೆಯ ಪ್ರಾಂಶುಪಾಲ ಅಡ್ವಕೇಟ್ ಹನೀಫ್ ಹುದವಿ ದೇಲಂಪಾಡಿ ಮಾತನಾಡಿ ಕರುನಾಡ ಮಣ್ಣಿನಲ್ಲಿ ಸಮನ್ವಯ ಶಿಕ್ಷಣಕ್ಕೆ ತನ್ನದೇ ಆದ ಗುರಿಯೊಂದಿಗೆ ಹೆಜ್ಜೆಯನ್ನಿಟ್ಟಿರುವ ನೂರುಲ್ ಹುದಾ ವಿದ್ಯಾಸಂಸ್ಥೆಯು ಸಹೃದಯಿಗಳ ಸಹಕಾರದ ಫಲವಾಗಿ ಕೇವಲ ಏಳು ವರ್ಷಗಳಲ್ಲಿ ಉತ್ತಮ ಅಭಿವೃದ್ಧಿ ಸಾಧಿಸಿದೆ ಎಂದು ಹೇಳಿದರು. ಸಂಸ್ಥೆಯ ಅಧ್ಯಕ್ಷ ಬುಶ್ರಾ ಅಬ್ದುಲ್ ಅಝೀಝ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಸ್ತ ವಿದ್ಯಾಭ್ಯಾಸ ಮಂಡಳಿ ಕಾಸರಗೋಡು ಜಿಲ್ಲಾ ಪ್ರ.ಕಾರ್ಯದರ್ಶಿ ಸೈಯ್ಯದ್ ಹುಸೈನ್ ತಂಙಳ್ ಮಾಸ್ತಿಕುಂಡು ಪ್ರಾರ್ಥಿಸಿದರು. ಸೈಯ್ಯದ್ ಬುರ್ಹಾನ್ ಅಲೀ ತಂಙಳ್, ಜಮಾಅತ್ ಅಧ್ಯಕ್ಷ ಇಸ್ಮಾಯಿಲ್ ಹಾಜಿ, ಸಂಸ್ಥೆಯ ಕಾರ್ಯದರ್ಶಿ ಹಿರಾ ಅಬ್ದುಲ್ ಖಾದರ್ ಹಾಜಿ, ಮಂಗಳ ಅಬೂಬಕ್ಕರ್ ಹಾಜಿ, ಅಬ್ದುಲ್ ಖಾದರ್ ಹಾಜಿ ಬಯಂಬಾಡಿ, ಎನ್ ಅಬ್ದುಲ್ ಖಾದರ್ ಮುಸ್ಲಿಯಾರ್, ನಿವೃತ್ತ ಎಎಸ್ಸೈ ಎಂ.ಡಿ ಹಸೈನಾರ್,  ರಶೀದ್ ಹಾಜಿ ಪರ್ಲಡ್ಕ. ಎಲ್.ಟಿ ಅಬ್ದುಲ್ ರಝಾಕ್ ಹಾಜಿ, ಎನ್.ಎಸ್ ಅಬ್ದುಲ್ ಹಾಜಿ ಈಶ್ವರಮಂಗಳ, ಆದಂ ಹಾಜಿ ಕಮ್ಮಾಡಿ, ಹಕೀಂ ಪರ್ತಿಪ್ಪಾಡಿ, ಹಮೀದ್ ಮುಸ್ಲಿಯಾರ್ ಮಡಿಕೇರಿ, ಹಂಝ ಹಾಜಿ ಕುಶಾಲನಗರ, ಮೂಸಾ ಕುದ್ಕುಪದವು, ಬಾತಿಷಾ ಹಾಜಿ ಪಾಟ್ರಕೋಡಿ ಅಶ್ರಫ್ ಹಾಜಿ ಪಳ್ಳತ್ತೂರು, ತಾಜ್ ಮಹಮ್ಮದ್, ಸಿ.ಎಚ್, ಅಬ್ದುಲ್ ಅಝೀಝ್ ಹಾಜಿ, ಇಬ್ರಾಹಿಂ ಹಾಜಿ ಮಂಡೆಕೋಲು, ಹಸೈನ್ ಹಾಜಿ ಸಿಟಿ ಬಜಾರ್, ಕೆ.ಕೆ ಇಬ್ರಾಹಿಂ ಹಾಜಿ, ಹಮೀದ್ ಹಾಜಿ ಸುಳ್ಯ, ಅಬ್ದುಲ್ ರಝಾಕ್ ಆತೂರು, ಹಾಶಿಂ ದಾರಿಮಿ, ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ, ಮುಹಮ್ಮದ್ ಒಮೇಗಾ, ಫಕ್ರುದ್ದೀನ್ ಹಾಜಿ ಕೊಯ್ಲ, ಸಲಾಂ ಪದಡ್ಕ, ಇಸಾಕ್ ಪಡೀಲ್, ಉಮರ್ ಸುಳ್ಯ, ಬಶೀರ್ ಸಿದ್ದಾಪುರ ಮುಂತಾದ ಹಲವಾರು ಗಣ್ಯರು ಭಾಗವಹಿಸಿದ್ದರು. ಸಂಸ್ಥೆಯ ಮ್ಯಾನೇಜರ್ ಕೆ.ಯು ಖಲೀಲುರ್ರಹ್ಮಾನ್ ಅರ್ಶದಿ ಕೊಲ್ಪೆ ಸ್ವಾಗತಿಸಿ ಸಂಸ್ಥೆಯ ಮುಂದಿನ ಯೋಜನೆಗಳ ಬಗ್ಗೆ ವಿವರಿಸಿದರು. ಮಾಡನ್ನೂರು ನೂರುಲ್ ಹುದಾ ವಿದ್ಯಾಸಂಸ್ಥೆಯು ಕ್ಷಿಪ್ರ ಅವಧಿಯಲ್ಲಿ ಅಭೂತಪೂರ್ವ ಯಶಸ್ಸನ್ನು ಸಾಧಿಸಿದೆ. ಸಂಸ್ಥೆಗೆ ಈಗಾಗಲೇ ಅದೆಷ್ಟೋ ಮಂದಿ ಪ್ರತಿಫಲಾಪೇಕ್ಷೆಯಿಲ್ಲದೇ ಸಹಕಾರ ನೀಡುತ್ತಿದ್ದು ಸಂಸ್ಥೆಯ ಅಭಿವೃದ್ಧಿಗೆ ಪ್ರಮುಖ ಕಾರಣವಾಗಿದೆ. ವಿದ್ಯಾಸಂಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು ನೂರಾರು ವಿದ್ಯಾರ್ಥಿಗಳು ವಿದ್ಯಾರ್ಜನೆಗೈಯುತ್ತಿದ್ದಾರೆ. ವಿದ್ಯಾಸಂಸ್ಥೆಯನ್ನು ಭವಿಷ್ಯದಲ್ಲಿ ಇನ್ನಷ್ಟು ಸಧೃಢವಾಗಿ ಬೆಳೆಸಲು ಎಲ್ಲರ ಸಹಕಾರ ಅಗತ್ಯ. -ಕೆ.ಯು ಖಲೀಲುರ್ರಹ್ಮಾನ್ ಅರ್ಶದಿ ಕೋಲ್ಪೆ, ಮ್ಯಾನೇಜರ್ 

Read More
error: Content is protected !!