ಜಿಲ್ಲೆ

ಕರಾವಳಿಜಿಲ್ಲೆ

ಸುಳ್ಯ : ಬಸ್ಸಿನ ಹಿಂಬದಿಯ ಟಯರ್ ಮಹಿಳೆಯ ಕಾಲಿನ ಮೇಲೆ ಚಲಿಸಿ ಕಾಲು ಮುರಿತ

ಸುಳ್ಯ: ಬೆಳ್ಳಾರೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಿಂದ ಸೋಣಂಗೇರಿ ಬಳಿ ಮಹಿಳೆಯೋರ್ವರು ಇಳಿಯುವ ಸಂದರ್ಭ ಬಿದ್ದು ಕಾಲಿಗೆ ಗಂಭೀರ ಗಾಯಗೊಂಡ ಘಟನೆ ಇಂದು ಸೋಣಂಗೇರಿಯಲ್ಲಿ ನಡೆದಿದೆ. ಮಹಿಳೆ

Read More
ಕರಾವಳಿಜಿಲ್ಲೆ

 ಪುತ್ತೂರು: ಕುಂಬ್ರದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳವಿಗೆ ಯತ್ನ-ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ

ಪುತ್ತೂರು: ಕುಂಬ್ರ ನ್ಯೂ ರಾಯಲ್ ದರ್ಬಾರ್ ಹೊಟೇಲ್ ಬಳಿ ನಿಲ್ಲಿಸಲಾಗಿದ್ದ ಆಕ್ಟಿವಾ ಸ್ಕೂಟರನ್ನು ಕಳವು ಮಾಡಲು ಯತ್ನಿಸಿದ ಘಟನೆ ಸೆ.18ರಂದು ರಾತ್ರಿ ನಡೆದಿದ್ದು ಕಳವಿಗೆ ಯತ್ನ ನಡೆಸಿದ ದೃಶ್ಯಗಳು ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ರಾಯಲ್ ದರ್ಬಾರ್ ಹೊಟೇಲ್ ಮಾಲಿಕ ಹಮೀದ್ ರವರು ತನ್ನ ಸ್ಕೂಟರನ್ನು ಹೊಟೇಲ್ ಮುಂಭಾಗದಲ್ಲಿ ನಿಲ್ಲಿಸಿ ಮಂಗಳೂರಿಗೆ ತೆರಳಿದ್ದರು. ಮಂಗಳೂರಿನಿಂದ ಬರುವಾಗ ತಡವಾಗಿರುವ ಕಾರಣ ಸ್ಕೂಟರ್ ಕೊಂಡು ಹೋಗಿರಲಿಲ್ಲ. ಅದೇ ದಿನ ರಾತ್ರಿ ಅಲ್ಲಿಗೆ ಸ್ಕೂಟರಿನಲ್ಲಿ ಬಂದ ಇಬ್ಬರು ಯುವಕರು ಸ್ಕೂಟರನ್ನು ಕಳವು ಮಾಡಲು ಯತ್ನ ನಡೆಸಿದ್ದಾರೆ. ಹೊಟೇಲ್ ಮಾಲಿಕರು ಸ್ಕೂಟರ್‌ನ ಹ್ಯಾಂಡ್ ಲಾಕ್ ಮಾಡಿರುವ ಕಾರಣ ಕೊಂಡೊಯ್ಯಲು ಸಾಧ್ಯವಾಗಿಲ್ಲ. ಆದರೂ ಸ್ಕೂಟರಿನಲ್ಲಿದ್ದ ಹೆಲ್ಮೆಟನ್ನು ಕಳವು ಮಾಡಿದ್ದು ಹಳೆಯ ಹೆಲ್ಮೆಟ್ ಅಲ್ಲಿ ಇಟ್ಟು ತೆರಳಿದ್ದಾರೆ. ಹ್ಯಾಂಡ್ ಲಾಕ್ ಹಾಕಿರುವ ಕಾರಣ ಕಳ್ಳತನ ಮಾಡಲು ಸಾಧ್ಯವಾಗಿಲ್ಲ. 

Read More
ಕರಾವಳಿಜಿಲ್ಲೆ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್’ಗೆ ಹಲವು ಪ್ರಶಸ್ತಿ

ಪುತ್ತೂರು: ಮೇನಾಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್’ನ ಶಾಮಿಲ್ ಮಧುರಾ ಅಬ್ದುಲ್ ಖಾದರ್ ಹಿರಿಯರ ವಿಭಾಗದ ಹಿಂದಿ ಕಂಠಪಾಠ ಸ್ವರ್ಧೆಯಲ್ಲಿ ಪ್ರಥಮ

Read More
ಜಿಲ್ಲೆರಾಜ್ಯ

ಸಚಿವ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಲಿ: ಹೆಚ್.ಡಿ.ಕೆ ಆಗ್ರಹ

‘ ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರ ಸಾವಿನ ಪ್ರಕರಣಕ್ಕೆ ನೈತಿಕ ಹೊಣೆ ಹೊತ್ತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಬೇಕು ಎಂದು

Read More
Uncategorizedಕರಾವಳಿಜಿಲ್ಲೆ

ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷರಾಗಿ ಅಶ್ರಫ್ ಕಲ್ಲೇಗ ಪುನರಾಯ್ಕೆ

ಪುತ್ತೂರು: ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಇದರ ಮಹಾಸಭೆ ಮುರ ಎಂಪಿಎಂ ಸಭಾಂಗಣದಲ್ಲಿ ನಡೆಯಿತು. ಯುವಜನ ಪರಿಷತ್ ರಾಜ್ಯ ಸಂಚಾಲಕರಾದ ನ್ಯಾಯವಾದಿ ಎಂ.ಪಿ ಅಬೂಬಕ್ಕರ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಅಶ್ರಫ್ ಕಲ್ಲೇಗ ಪುನರಾಯ್ಕೆಗೊಂಡರು. ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ಬಾವು ಪಡೀಲ್, ಉಪಾಧ್ಯಕ್ಷರುಗಳಾಗಿ ಇಬ್ರಾಹಿಂ ಸಾಗರ್, ಮೂಸಾ ಮಾಣಿ ಹಾಗೂ ಶರೀಫ್ ಸಾಲ್ಮರ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಬಶೀರ್ ಪರ್ಲಡ್ಕ, ನೌಶಾದ್ ಬೊಳ್ವಾರು ಹಾಗೂ ಶರೀಫ್ ಮುಕ್ರಂಪಾಡಿ, ಕೋಶಾಧಿಕಾರಿಯಾಗಿ ಅಡ್ವೊಕೇಟ್ ಶಾಕಿರ್ ಹಾಜಿ ಮಿತ್ತೂರು ಆಯ್ಕೆಯಾದರು. ಸಂಘಟನಾ ಕಾರ್ಯದರ್ಶಿಯಾಗಿ ಜುನೈದ್ ಸಾಲ್ಮರ, ಸೂಫಿ ಬಪ್ಪಳಿಗೆ, ರಫೀಕ್ ಬಾಂಬೆ, ಹಸೈನಾರ್ ಬನಾರಿ, ಯೂಸುಫ್ ತಾರಿಗುಡ್ಡೆ, ಹಮೀದ್ ಸೋಂಪಾಡಿ, ಇಬ್ರಾಹಿಂ ಪುತ್ತುಸೇಟ್, ಪತ್ರಿಕಾ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಮುಲಾರ್‌ರವರನ್ನು ಆಯ್ಕೆ ಮಾಡಲಾಯಿತು. ಸಂಚಾಲಕರಾಗಿ ಖಾಸಿಂ ಹಾಜಿ ಮಿತ್ತೂರು, ನ್ಯಾಯವಾದಿ ನೂರುದ್ದೀನ್ ಸಾಲ್ಮರ ಆಯ್ಕೆಯಾದರು. ಕಾನೂನು ಸಲಹೆಗಾರರಾಗಿ ಕೆ.ಎಂ ಸಿದ್ದೀಕ್ ಆಯ್ಕೆಯಾದರು. ಸಮಿತಿ ಸದಸ್ಯರಾಗಿ ಇಸ್ಮಾಯಿಲ್ ಬಪ್ಪಳಿಗೆ, ರಶೀದ್ ಮುರ, ಹಮೀದ್ ಮೌಲ ಕಬಕ, ಆದಂ ಕೆದುವಡ್ಕ, ಅಲ್ತಾಫ್ ಬೆಟ್ಟಂಪಾಡಿ, ಇಸ್ಮಾಯಿಲ್ ಸಾಲ್ಮರ, ಅಬ್ದುಲ್ ಹಮೀದ್ ಸಾಲ್ಮರ, ಸಿದ್ದೀಕ್ ಕಲ್ಲೇಗ, ಉನೈಸ್ ಕಬಕ, ಬಾತಿಷ ವಳತ್ತಡ್ಕ ಹಾಗೂ ಶರೀಫ್ ಮುಕ್ರಂಪಾಡಿ ಆಯ್ಕೆಯಾಗಿದ್ದಾರೆ.

Read More
ಕರಾವಳಿಜಿಲ್ಲೆ

ಬಾತಿಷಾ ಸುಲ್ತಾನ್ ಸ್ಮರಣಾರ್ಥ ತಿಂಗಳಾಡಿಯಲ್ಲಿ ಬೃಹತ್ ರಕ್ತದಾನ ಶಿಬಿರ

ಪುತ್ತೂರು: ಎಸ್ಕೆಎಸ್ಸೆಸ್ಸೆಫ್ ವಿಖಾಯ ಕುಂಬ್ರ ವಲಯದ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಮರ್‌ಹೂಂ ಬಾತಿಷಾ ಸುಲ್ತಾನ್ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ ಸೆ.೧೮ರಂದು ತಿಂಗಳಾಡಿ

Read More
ಕರಾವಳಿಜಿಲ್ಲೆ

ಸಾಮಾಜಿಕ ಕಾರ್ಯಕರ್ತ ಶಬೀರ್ ಕಟ್ಟತ್ತಾರು ಹೃದಯಾಘಾತದಿಂದ ನಿಧನ

ಪುತ್ತೂರು: ಮಾಡಾವು ಸಮೀಪದ ಕಟ್ಟತ್ತಾರು ನಿವಾಸಿ ಶಬೀರ್(25.ವ) ಅವರು ಹೃದಯಘಾತದಿಂದ ಸೆ.17ರಂದು ನಿಧನರಾಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಶಬೀರ್ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸುವ ಮಧ್ಯೆಯೇ ಮೃತಪಟ್ಟಿರುವುದಾಗಿ

Read More
ಕರಾವಳಿಜಿಲ್ಲೆ

ಮುಸ್ಲಿಮರು ಮಾತ್ರವಲ್ಲ ಹಿಂದೂಗಳೂ ಮುಂದಿನ ದಿನಗಳಲ್ಲಿ ಸರಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ ಎಸ್.ಬಿ ದಾರಿಮಿ

ಪುತ್ತೂರು: ಸರಕಾರದ ಅನ್ಯಾಯ ಮಿತಿ ಮೀರುತ್ತಿದ್ದು ನ್ಯಾಯ ಕೇಳಿದವರಿಗೆ ನ್ಯಾಯ ನಿರಾಕರಣೆಯಾಗುತ್ತಿದೆ. ಸರಕಾರ ಹಿಂದೂ ಧರ್ಮದ ತತ್ವಕ್ಕೆ ಮೋಸ ಮಾಡುವ ಕಾರ್ಯ ಮಾಡುತ್ತಿದ್ದು ಪರಿಸ್ಥಿತಿ ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಹಿಂದೂಗಳೇ ಸರಕಾರದ ವಿರುದ್ಧ ಮುಗಿ ಬೀಳಲಿದ್ದಾರೆ ಎಂದು ಮುಸ್ಲಿಂ ಧಾರ್ಮಿಕ ವಿಧ್ವಾಂಸ ಎಸ್.ಬಿ ಮಹಮ್ಮದ್ ದಾರಿಮಿ ಹೇಳಿದರು. ಮಂಗಳೂರಿನಲ್ಲಿ ಸುರತ್ಕಲ್ ವಲಯ ಮುಸ್ಲಿಂ ಐಕ್ಯತಾ ವೇದಿಕೆ ವತಿಯಿಂದ ಸೆ.16ರಂದು ಸಂಜೆ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ನಿಮಗೆ ಅಧಿಕಾರ ಇದೆ ಎಂದು ಅನ್ಯಾಯವನ್ನೇ ಮಾಡುತ್ತಿದ್ದೀರಿ. ಇದು ನಿಮಗೆ ತಿರುಗುಬಾಣವಾಗಲಿದ್ದು ಮುಸ್ಲಿಮರು ಮಾತ್ರವಲ್ಲ ಹಿಂದೂಗಳೂ ನಿಮ್ಮ ವಿರುದ್ಧ ಬೀದಿಗಿಳಿಯಲಿದ್ದಾರೆ ಎಂದು ಹೇಳಿದರು. ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದಾಗ ಸಂಸದರ ಕಾರು ಅಲ್ಲಾಡಿದ್ದನ್ನು ನಾವು ನೋಡಿದ್ದೇವೆ. ನಿಮ್ಮ ಧೋರಣೆ ಬದಲಾಯಿಸದೇ ಇದ್ದಲ್ಲಿ ನಿಮಗೆ ಮುಂದಕ್ಕೂ ಇದೇ ಪರಿಸ್ಥಿತಿ  ಬರಲಿದೆ ಎಂದವರು ಹೇಳಿದರು.

Read More
ಕರಾವಳಿಕ್ರೈಂಜಿಲ್ಲೆ

ಪುತ್ತೂರು ಫೂಟ್’ವೇರ್ ಅಂಗಡಿಯಿಂದ ಲಕ್ಷಾಂತರ ರೂ ಹಣ ಕಳ್ಳತನ

ಪುತ್ತೂರು: ಇಲ್ಲಿನ ಮುಖ್ಯರಸ್ತೆಯಲ್ಲಿರುವ ಪ್ರಕಾಶ್ ಫೂಟ್‌ವೇರ್ ಅಂಗಡಿಗೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ನಗದು ಕಳವು ಮಾಡಿದ ಘಟನೆ ಸೆ.16ರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಪ್ರಕಾಶ್ ಫೂಟ್‌ವೇರ್

Read More
Uncategorizedಕರಾವಳಿಕ್ರೈಂಜಿಲ್ಲೆ

ಮಹಿಳೆಗೆ ಲೈಂಗಿಕ ಕಿರುಕುಳ ಪ್ರಕರಣ
ಹಿಂದೂಪರ ಸಂಘಟನೆಗಳಿಂದ ತಿಂಗಳಾಡಿಯಲ್ಲಿ ಜಾಥಾ, ರಸ್ತೆ ತಡೆ, ಪ್ರತಿಭಟನೆ

ಪುತ್ತೂರು: ಹಿಂದೂ ಸಮಾಜದ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿದ್ದು ಮುಂದಕ್ಕೆ ಇದೇ ರೀತಿ ಮುಂದುವರಿದರೆ ಹಿಂದೂ ಸಮಾಜ ಸುಮ್ಮನಿರುವುದಿಲ್ಲ, ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಬಜರಂಗದಳದ

Read More
error: Content is protected !!