ರಾಜಕೀಯ

ಕರಾವಳಿರಾಜಕೀಯ

ಕುಂಬ್ರ: ಕಟ್ಟಡ ಕಾರ್ಮಿಕರಿಗೆ ಬಸ್ ಪಾಸ್ ವಿತರಣಾ ಕಾರ್ಯಕ್ರಮ
ಕಾರ್ಮಿಕರ ಶ್ರೇಯೋಭಿವೃದ್ದಿಗೆ 15 ಸಾವಿರ ಕೋಟಿ ಮೀಸಲು: ಮಠಂದೂರು

ಪುತ್ತೂರು: ರಾಜ್ಯ ಮತ್ತು ಕೇಂದ್ರ ಸರಕಾರ ಕಾರ್ಮಿಕರ ಪರವಾಗಿಯೇ ಇದೆ. ಕಾರ್ಮಿಕರ ಸಂಕಷ್ಠಗಳಿಗೆ ಸದಾ ಸ್ಪಂದನೆಯನ್ನು ನೀಡುತ್ತಿದ್ದು ಕೊರೊನಾ ಕಾಲದಲ್ಲೂ ಅವರಿಗೆ ನೆರವು ನೀಡಲಾಗಿದೆ, ಬಸ್ ಪಾಸ್

Read More
ರಾಜಕೀಯ

ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ

ಇಂಗ್ಲೆಂಡ್: ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ರಿಷಿ ಸುನಕ್ ಅವರಿಗೆ 193 ಸಂಸದರ ಬೆಂಬಲ ಲಭಿಸಿದ್ದು, ಪ್ರತಿಸ್ಪರ್ಧಿ ಬೆನ್ನಿ ಮೊರ್ಡಾಂಟ್

Read More
ಕರಾವಳಿರಾಜಕೀಯ

ವ್ಯಾಪಾರಿಗಳ ಮೇಲೆ ಕಾಣಿಯೂರಿನಲ್ಲಿ ಗುಂಪು ಹಲ್ಲೆ ಪ್ರಕರಣ: ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು- ಕಾಂಗ್ರೆಸ್ ಮುಖಂಡ ಹಾರಿಸ್ ಬೈಕಂಪಾಡಿ ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ಮುಸ್ಲಿಂ ವ್ಯಾಪಾರಿಗಳಾದ ಮಂಗಳೂರಿನ ಅಡ್ಡೂರಿನ ರಫೀಕ್ ಮತ್ತು ರಮೀಝುದ್ದೀನ್ ಎಂಬವರ ಮೇಲೆ ಮೇಲೆ ನಡೆದ ಕೊಲೆಯತ್ನ ಪ್ರಕರಣದ

Read More
ರಾಜಕೀಯರಾಜ್ಯ

ಭಾರತ್ ಜೋಡೋ ಪಾದಯಾತ್ರೆಯಲ್ಲಿ ನಟಿ ರಮ್ಯಾ ಅವರಿಗೆ ಕೆನ್ನೆಗೆ ಬಾರಿಸಿ ಸ್ವಾಗತಿಸಿದ ಡಿ.ಕೆ ಶಿವಕುಮಾರ್

ರಾಯಚೂರು: ಭಾರತ್ ಜೋಡೋ ಪಾದಯಾತ್ರೆಯ ಕೊನೆಯ ಕ್ಷಣದಲ್ಲಿ ಮಾಜಿ ಸಂಸದೆ, ನಟಿ ರಮ್ಯಾ ಅವರು ಆಗಮಿಸಿದ್ದು, ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರೀತಿಯಿಂದ ರಮ್ಯಾ

Read More
ಕರಾವಳಿರಾಜಕೀಯ

ಕೊನೆಗೂ ಮೌನ ಮುರಿದ ಶಕುಂತಳಾ ಶೆಟ್ಟಿ

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ವಿವಾದಿತ ಪುರೋಹಿತರೋರ್ವರಿಂದ ಪೂಜೆ ಮಾಡಿಸಿದ ವಿಚಾರ ಗೊಂದಲಕ್ಕೆ ಕಾರಣವಾಗಿದಲ್ಲದೇ ಕಾರ್ಯಕರ್ತರ ಭಾರೀ ಆಕ್ರೋಶಕ್ಕೂ ಕಾರಣವಾಗಿತ್ತು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸ್ಪಷ್ಟನೆ ನೀಡಬೇಕೆಂದು ಆಗ್ರಹ ವ್ಯಕ್ತವಾಗಿತ್ತು. ಆದರೆ ಶಕುಂತಳಾ ಶೆಟ್ಟಿಯವರು ಕಾಂಗ್ರೆಸ್ ಸಭೆಗೂ ಬರದೇ ಸ್ಪಷ್ಟನೆಯನ್ನೂ ನೀಡದೆ ಮೌನಕ್ಕೆ ಶರಣಾಗಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ ವಿಶ್ವನಾಥ್ ರೈ ಅವರು ಕ್ಷಮೆ ಕೇಳಿದ್ದರೂ ಕಾರ್ಯಕರ್ತರಲ್ಲಿ ಅಸಮಾಧಾನ ಹಾಗೆಯೇ ಮುಂದುವರಿದಿತ್ತು. ಇದೀಗ ಕೆಲವು ದಿನಗಳ ಬಳಿಕ ಶಕುಂತಳಾ ಶೆಟ್ಟಿಯವರು ವಿವಾದಿತ ಪುರೋಹತರೋರ್ವರಿಂದ ಪೂಜೆ ಮಾಡಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ಮೊದಲ ಬಾರಿ ಮೌನ ಮುರಿದಿದ್ದಾರೆ. ಅ.೨೧ರಂದು ಪುತ್ತೂರು ಬೈಪಾಸ್ ಅಶ್ಮಿ ಕಂಫರ್ಟ್ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಾವೇಶದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಕುಂತಳಾ ಶೆಟ್ಟಿಯವರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಆಯುಧ ಪೂಜೆಯಲ್ಲಿ ಭಾಗವಹಿಸಿದ್ದು ಹೌದು, ಪ್ರಸಾದ ಸ್ವೀಕರಿಸಿದ್ದೂ ಹೌದು, ಆದರೆ ಪೂಜೆ ಮಾಡಿದವರನ್ನು ಕರೆಸಿದ್ದು ನಾನಲ್ಲ ಎಂದು ತಿಳಿಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧೀನದಲ್ಲಿರುವ ಪೂಜಾ ಸಮಿತಿಯವರು ಅವರನ್ನು ಕರೆಸಿದ್ದು ಪೂಜೆಗೆ ಯಾರು ಬರುತ್ತಾರೆಂದು ನನಗೆ ಗೊತ್ತೂ ಇರಲಿಲ್ಲ. ಈ ಹಿಂದೆ ಬ್ಲಾಕ್ ಕಚೇರಿಯಲ್ಲಿ ನಡೆದ ಆಯುಧ ಪೂಜೆಗೂ ಶ್ರೀ ಕೃಷ್ಣ ಉಪಾಧ್ಯಾಯರು ಬಂದಿದ್ದರು. ಇತ್ತೀಚೆಗೆ ಅವರು ಕೋಮು ಪ್ರಚೋದನಕಾರಿ ಭಾಷಣ ಮಾಡಿದ ವಿಚಾರ ಆ ಬಳಿಕವೇ ತಿಳಿಯಿತು ಎಂದು ಅವರು ತಿಳಿಸಿದರು. ನಾನು ಸಾಮಾಜಿಕ ಜಾಲತಾಣ ಉಪಯೋಗಿಸುವುದು ಕಮ್ಮಿ, ಅದರಲ್ಲಿ ಬಂದಿರುವ ಆರೋಪಗಳ ಬಗ್ಗೆ ಹೆಚ್ಚು ನನಗೆ ಗೊತ್ತಿಲ್ಲ, ನನ್ನನ್ನು ಗೊತ್ತಿರುವವರಿಗೆ ಅದೆಲ್ಲಾ ಗೊತ್ತಿದೆ ಎಂದು ಶಕುಂತಳಾ ಶೆಟ್ಟಿ ತಿಳಿಸಿದರು. “ಪುರೋಹಿತ ವಿವಾದಿತ ವ್ಯಕ್ತಿಯೆಂದು ನನಗೆ ಗೊತ್ತಿರಲಿಲ್ಲ. ಗೊತ್ತಾದ ತಕ್ಷಣ ನಾನು ಪಕ್ಷದ ಪರವಾಗಿ ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ್ದೇನೆ. ಮುಂದೆ ಯಾವುದೇ ಕಾರ್ಯಕ್ರಮ ನಡೆಸುವಾಗಲೂ ಸಭೆ ಕರೆದು ಚರ್ಚಿಸಿಯೇ ಯಾವುದೇ ತೀರ್ಮಾನವನ್ನು ಕೈಗೊಳ್ಳುತ್ತೇವೆ” ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಸಭೆಗೆ ತಿಳಿಸಿದರು.

Read More
ಕರಾವಳಿರಾಜಕೀಯ

ಶಕುಂತಳಾ ಶೆಟ್ಟಿ ಪಕ್ಷ ಬದಲಾಯಿಸಿದರೂ ಮನಸ್ಸು ಬದಲಾಯಿಸಲಿಲ್ಲ: ಇಸಾಕ್ ಸಾಲ್ಮರ

ಪುತ್ತೂರು; ಬಿಜೆಪಿಯಿಂದ ಕಾಂಗ್ರೆಸ್‌ಗೆ ಪಕ್ಷಾಂತರ ಗೊಂಡ ಮಾಜಿ ಶಾಸಕಿ ಪಕ್ಷಾಂತರವಾಗಿದ್ದಾರೆಯೇ ಹೊರತು ಅವರ ಮನಸ್ಸು ಸಂಘಪರಿವಾರದಲ್ಲೇ ಇದೆ, ಕೋಮುವಾದವನ್ನು ತನ್ನ ಬಗುಲಲ್ಲೇ ಇಟ್ಟುಕೊಂಡಿದ್ದಾರೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ

Read More
ರಾಜಕೀಯರಾಜ್ಯ

ವಾಚ್ ಪೇ ಪಿಲ್ಲೋ ಪೇ ಮೂಲಕ ಪಡೆದ ಲಂಚವೆಷ್ಟು: ಕಾಂಗ್ರೆಸ್ ಕಾಲೆಳೆದ ಬಿಜೆಪಿ

ಬೆಂಗಳೂರು: ‘ಟಾಯ್ಲೆಟ್ ಚೊಂಬಿನಲ್ಲಿ ಲಂಚ, ಹಾಸ್ಟೆಲ್ ದಿಂಬಿನಲ್ಲಿ ಲಂಚ, ‘ವಾಚ್‌ ಪೇ’ ಮೂಲಕವೂ ನೀವು ಪಡೆದ ಲಂಚ ಎಷ್ಟು’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು

Read More
ಕರಾವಳಿರಾಜಕೀಯ

ನಾನೇ ನಿಲ್ಲುವೆ..ನಾನೇ ಗೆಲ್ಲುವೆ:
ಮುಂದಿನ ಬಾರಿಯೂ ಪುತ್ತೂರು ಕ್ಷೇತ್ರಕ್ಕೆ ಶಕುಂತಳಾ ಶೆಟ್ಟಿ ರೆಡಿ

ಪುತ್ತೂರು; ಮುಂಬರುವ ಚುನಾವಣೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಸ್ಪರ್ದಿಸುತ್ತಾರೋ ಇಲ್ಲವೋ ಎಂಬ ಅನುಮಾನಗಳಿಗೆ ಕಬಕದಲ್ಲಿ ನಡೆದ ಪ್ರತಿಭಟನೆಯಲ್ಲಿ ಸ್ಪಷ್ಟ ಉತ್ತರ ನೀಡಿದ್ದು ಮುಂದಿನ ಚುನಾವಣೆಗೆ ನಾನು

Read More
ರಾಜಕೀಯರಾಜ್ಯ

ಪೇಸಿಎಂ’ ಅಭಿಯಾನದ ಬಳಿಕ ‘ಸೇಸಿಎಂ’ ಅಭಿಯಾನ ಶುರು ಮಾಡಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ‘ಪೇಸಿಎಂ’ ಅಭಿಯಾನ ಆರಂಭಿಸಿದ್ದ ಕಾಂಗ್ರೆಸ್, ಪ್ರಶ್ನೆಗಳನ್ನು ಮುಂದಿಟ್ಟು ‘ಸೇಸಿಎಂ’ ಅಭಿಯಾನ ಶುರು ಮಾಡಿದೆ. ಅಲ್ಲದೆ, ಈ ಪ್ರಶ್ನೆಗಳಿಗೆ

Read More
error: Content is protected !!