ಎಸ್ಡಿಪಿಐ ಸುಳ್ಯ ವಿಧಾನಸಭಾ ಸಮಿತಿಯ ಸಭೆ
ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಸಭೆಯು ಸವಣೂರು ಅಂಬೇಡ್ಕರ್ ಭವನದಲ್ಲಿ ಸುಳ್ಯ ವಿಧಾನಸಭಾ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ
Read Moreಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಸಭೆಯು ಸವಣೂರು ಅಂಬೇಡ್ಕರ್ ಭವನದಲ್ಲಿ ಸುಳ್ಯ ವಿಧಾನಸಭಾ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ
Read Moreಪುತ್ತೂರು: ಬದ್ರಿಯಾ ಜುಮಾ ಮಸೀದಿ ಪೇರಲ್ತಡ್ಕ, ಇರ್ದೆ ಇಲ್ಲಿ ನವೀಕೃತ ಮಸೀದಿಯ ಉದ್ಘಾಟನೆ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮ ಅ. 8ರಂದು ಸಂಜೆ 3 ಗಂಟೆಗೆ ನಡೆಯಲಿದೆ.
Read Moreಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮಾಡಿರುವ ಭಾಷಣದ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ‘ನಾನು ಚುನಾವಣೆಯಲ್ಲಿ ಗೆದ್ದು ಶಾಸಕನಾದ ಬಳಿಕ ಹಲವರು ನನ್ನ ಬಳಿಗೆ ಬಂದು ಅಶೋಕಣ್ಣ ನಿಮ್ಮ ಪರ ನಾವು ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅದರಲ್ಲಿ ಕೆಲವರು ಚುನಾವಣೆ ಮುಗಿಯುವ ತನಕವೂ ಬ್ಯಾಟಿನದ್ದೇ ಡಿಪಿ ಹಾಕಿದ್ದರು. ಚುನಾವಣೆ ವೇಳೆ ಬ್ಯಾಟ್ನ ಡಿಪಿ ಹಾಕಿದವರ ಸ್ಕ್ರೀನ್ ಶಾಟ್ ನನ್ನ ಬಳಿ ಇದೆ. ನನ್ನ ಜೊತೆಯಲ್ಲೇ ಇದ್ದು ಬ್ಯಾಟ್ ಬೀಸಿದವರು ಯಾರೆಂದು ನನಗೆ ಗೊತ್ತಿದೆ. ಯಾರೆಲ್ಲಾ ಪಕ್ಷಕ್ಕೆ ವಿರುದ್ದವಾಗಿ ಮತ ಹಾಕಿದ್ದಾರೆಂದೂ ಗೊತ್ತಿದೆ. ಆದರೆ ನಾನು ಗೆದ್ದ ಬಳಿಕ ಯಾರನ್ನೂ ದೂರ ಮಾಡಿಲ್ಲ, ಎಲ್ಲರನ್ನೂ ಹತ್ತಿರ ಮಾಡಿಕೊಂಡಿದ್ದೇನೆ, ಬ್ಯಾಟ್ ಬೀಸಿದವರು, ಬಿಜೆಪಿಯವರು ಈಗ ನನ್ನ ಬಳಿಗೆ ಬಂದು ಅವರ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದರು. ಶಾಸಕರು ಆಡಿರುವ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯ ವಿಷಯವಾಗಿದೆ. ಅಶೋಕ್ ರೈ ಅವರ ಜೊತೆಗಿದ್ದುಕೊಂಡೇ ವಿರುದ್ಧವಾಗಿ ಕೆಲಸ ಮಾಡಿದವರು ಯಾರು..? ಎದುರಿಗೆ ಅಶೋಕ್ ರೈಯವರಿಗೆ ಸಪೋರ್ಟ್ ಮಾಡುವವರಂತೆ ನಟಿಸಿ ಒಳಗಿಂದೊಳಗೆ ಬ್ಯಾಟ್ ಬೀಸಿದವರು ಯಾರು..? ಅಂತವರಿಗೆ ಪಕ್ಷದಲ್ಲಿರಲು ನೈತಿಕತೆ ಇದೆಯೇ ಎನ್ನುವ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ಒಟ್ಟಿನಲ್ಲಿ ಶಾಸಕರು ಆಡಿರುವ ಮಾತು ಪುತ್ತೂರು ಕಾಂಗ್ರೆಸ್ನಲ್ಲಿ ಸಂಚಲನ ಸೃಷ್ಠಿಸಿದೆ.
Read Moreಪುತ್ತೂರು: ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಪಿ ಶಾಬು ಸಾಹೇಬ್ ಪಾಲ್ತಾಡ್ ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ರವರ ಆದೇಶದ ಮೇರೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್, ಸ್ಪೀಕರ್ ಯು.ಟಿ ಖಾದರ್, ಮಾಜಿ ಸಚಿವ ರಮಾನಾಥ ರೈ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮೊದಲಾದವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಪುಟ್ಟಸ್ವಾಮಿ ಗೌಡರವರು ಪಿ ಶಾಬು ಸಾಹೇಬ್ ಪಾಲ್ತಾಡ್ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಶಾಬು ಸಾಹೇಬ್ರವರು ಕಳೆದ 45 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಧ್ಯಾಕ್ಷರಾಗಿ, ಕೆ.ಪಿ.ಸಿ.ಸಿ ಸೇವಾದಳದ ಸದಸ್ಯರಾಗಿ, ಕೆ.ಪಿ.ಸಿ.ಸಿ ಅಲ್ಪಸಂಖ್ಯಾತರ ಕೋ-ಆರ್ಡಿನೇಟರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ಸಕ್ರಿಯರಾಗಿರುವ ಶಾಬು ಸಾಹೇಬ್ರವರು ಸಂಗ ಸಂಸ್ಥೆಗಳಲ್ಲೂ ತೊಡಗಿಸಿಕೊಂಡಿದ್ದರು.
Read Moreಪುತ್ತೂರು: ಕಾಂಗ್ರೆಸ್ ಎಂದೂ ಕೋಮುವಾದವನ್ನು ಮಾಡುವುದಿಲ್ಲ ಮತ್ತು ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡುವುದಿಲ್ಲ, ಅಭಿವೃದ್ದಿಯೋಂದೇ ಕಾಂಗ್ರೆಸ್ ಧ್ಯೇಯವಾಗಿದ್ದು ಪಕ್ಷದ ಯುವ ಕಾರ್ಯಕರ್ತರು ಜಾತಿ,
Read Moreಸುಳ್ಯ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸುಳ್ಯದ ಸದರ್ನ್ ರೆಸಿಡೆನ್ಸಿ ಸಭಾಂಗಣದಲ್ಲಿ ಸೆ 26 ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು.ಸುಳ್ಯ ವಿಧಾನಸಭಾ ಚುನಾವಣೆಯ ಬಳಿಕ ಸುಳ್ಯದ ಕಾಂಗ್ರೆಸ್
Read Moreಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೆಪ್ಟೆಂಬರ್ 25ರಂದು ಸುಳ್ಯದ ಸಧರ್ನ್ ರೆಸಿಡೆನ್ಸಿ ಸಭಾಂಗಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉಸ್ತುವಾರಿ ಮಮತಾ ಗಟ್ಟಿಯವರ ನೇತೃತ್ವದಲ್ಲಿ ನಡೆಯಿತು. ಕಳೆದ ಕೆಲವು
Read Moreವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಸಮುದಾಯವೊಂದಕ್ಕೆ ಐರನ್ ಬಾಕ್ಸ್ ಮತ್ತು ಕುಕ್ಕರ್ಗಳನ್ನು ಹಂಚಿರುವುದಾಗಿ ಆರೋಪಿಸಿ ಮೈಸೂರು ಬಿಜೆಪಿ ಘಟಕದಿಂದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಗೆ ದೂರು
Read Moreಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ನಡೆಸಿ ಒಮ್ಮತಕ್ಕೆ ಬಂದಿದ್ದು ಬಿಜೆಪಿ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ ಜೊತೆಗಿನ
Read Moreಪುತ್ತೂರು: ಮನೆ ಇಲ್ಲದೇ ಸಂಕಷ್ಟದಲ್ಲಿದ್ದ ಕುಟುಂಬವೊಂದಕ್ಕೆ ಮುಂಡೂರು ವಲಯ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮನೆ ನಿರ್ಮಿಸಿಕೊಡುವ ಮೂಲಕ ಮಾದರಿಯಾಗಿದ್ದಾರೆ. ಮುಂಡೂರು ಬೂತ್ 90ರ ಕಾರ್ಯದರ್ಶಿ ಜಗದೀಶ್ ಬದಿಯಡ್ಕ ಅವರಿಗೆ ಮುಂಡೂರು ವಲಯ ಕಾಂಗ್ರೆಸ್ ವತಿಯಿಂದ ನೂತನ ಮನೆ ನಿರ್ಮಿಸಲಾಗಿದ್ದು ಮನೆಯ ಹಸ್ತಾಂತರ ಕಾರ್ಯವನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ್ ರೈ ನೆರವೇರಿಸಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಯಾಕೂಬ್ ಮುಲಾರ್, ಎಸ್.ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ ನರಿಮೊಗರು, ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಸುಪ್ರೀತ್ ಕಣ್ಣರಾಯ, ಮುಂಡೂರು ಬೂತ್ ಅಧ್ಯಕ್ಷ ಇಬ್ರಾಹಿಂ ಮುಲಾರ್, ಕೆಮ್ಮಿಂಜೆ ಬೂತ್ ಅಧ್ಯಕ್ಷ ಗಣೇಶ್ ಕೊರುಂಗು, ಪ್ರಮುಖರಾದ ಅಣ್ಣಿ ಪೂಜಾರಿ ಹಿಂದಾರು, ಅಶ್ರಫ್ ಮುಲಾರ್, ರಝಾಕ್ ಮುಲಾರ್, ಜಗದೀಶ್ ಬದಿಯಡ್ಕ ಮತ್ತಿತರ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
Read More