ರಾಜಕೀಯ

ಕರಾವಳಿರಾಜಕೀಯರಾಜ್ಯ

ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಮಟ್ಟದ ಅಲ್ಪಸಂಖ್ಯಾತರ ಮುಖಂಡರ ಸಭೆ; ಪಕ್ಷದ ಬಲವರ್ಧನೆಗೆ ಹೆಚ್ಚಿನ ಒತ್ತು ಕೊಡಬೇಕು-ಮೀರಾ ಸಾಹೇಬ್ ಕಡಬ

ಪುತ್ತೂರು: ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ರಾಜ್ಯ ಮಟ್ಟದ ಅಲ್ಪಸಂಖ್ಯಾತರ ಮುಖಂಡರುಗಳ ಸಭೆ ಪಕ್ಷದ ಬೆಂಗಳೂರಿನಲ್ಲಿರುವ ಕಚೇರಿ ಜೆಪಿ ಭವನದಲ್ಲಿ ಜು.18ರಂದು ನಡೆಯಿತು.  ಸಭೆಯಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿಗಳು,ಕಡಬ ತಾಲೂಕು ಅಧ್ಯಕ್ಷರಾದ ಹಾಜಿ ಸಯ್ಯದ್ ಮೀರಾ ಸಾಹೇಬ್ ಅವರು ಮಾತನಾಡಿ ಪಕ್ಷ ಸಂಘಟನೆಗೆ ನಾವೆಲ್ಲಾ ಹೆಚ್ಚಿನ ಒತ್ತು  ಕೊಡಬೇಕು, ಪಕ್ಷದ ಕಾರ್ಯಕರ್ತರಿಗೆ ಕಳೆದ ವಿಧಾನಸಭಾ ಚುನಾವಣೆ ಸೋಲಿಗೆ ಆತ್ಮವಿಶ್ವಾಸವನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳುವ ಮೂಲಕ ನಾವೆಲ್ಲಾ ಪಕ್ಷದ ಬಲವರ್ಧನೆಗಾಗಿ ಪ್ರಯತ್ನಿಸಬೇಕು ಎಂದು ಹೇಳಿದರು. ಮುಂಬರುವ, ತಾ.ಪಂ, ಜಿ.ಪಂ ಮತ್ತು ಲೋಕಸಭಾ ಚುನಾವಣೆಗಳಲ್ಲಿ ನಮ್ಮ ಪಕ್ಷ ನಿರ್ಣಾಯಕ ಪಾತ್ರವನ್ನು ವಹಿಸುವುದಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರು ಪಕ್ಷದ ಜಿಲ್ಲಾ ಮುಖಂಡರುಗಳ ಸಭೆ ಕರೆದು ಮಾರ್ಗದರ್ಶನ ನೀಡುವುದರೊಂದಿಗೆ ಪಕ್ಷದ ಜಾತ್ಯಾತೀತ ನಿಲುವು, ಸಾಮಾಜಿಕ ನ್ಯಾಯವನ್ನು ಬಲಪಡಿಸಬೇಕೆಂದು ಅವರು ಹೇಳಿದರು.  ಸಭೆಯಲ್ಲಿ ಪಕ್ಷದ ರಾಜ್ಯ ಮಟ್ಟದ ಪದಾಧಿಕಾರಿಗಳು ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಲ್ಪಸಂಖ್ಯಾತರ ಮುಖಂಡರುಗಳು ಉಪಸ್ಥಿತರಿದ್ದರು.

Read More
ರಾಜಕೀಯರಾಜ್ಯ

ಸದನಕ್ಕೆ ಅಗೌರವ ತೋರಿದ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್

ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಸ್ಪೀಕರ್ ಯು.ಟಿ.ಖಾದರ್

Read More
ಕರಾವಳಿರಾಜಕೀಯರಾಜ್ಯ

ಮಾತನಾಡದೆ ಇಷ್ಟು ಕಾರುಬಾರು ಮಾಡುತ್ತೀರಿ: ಯು. ಟಿ ಖಾದರ್

ಸದನದಲ್ಲಿ ದ ಕ ಜಿಲ್ಲೆಯವರು ಮಾತನಾಡುವುದು ಕಡಿಮೆ ನಾವು ಇನ್ನೊಬ್ಬರು ಮಾತನಾಡುವುದನ್ನು ಕೇಳುವುದು ಮಾತ್ರ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಭಾಧ್ಯಕ್ಷ ಯುಟಿ ಖಾದರ್

Read More
ಕರಾವಳಿರಾಜಕೀಯ

ಸುಳ್ಯ ಕಾಂಗ್ರೆಸ್: ಸೋಲಿನ ಕಾರಣಗಳು ಸ್ಪಷ್ಟವಾಗಿರುವಾಗ ಅಲ್ಲೊಂದು ಪರಾಮರ್ಶೆ ಎಂಬ ಪ್ರಹಸನ ಯಾಕೆ…

✍️ಹೈದರ್ ಆಲಿ ಐವತ್ತೊಕ್ಲು ಪುತ್ತೂರು: ಸುಳ್ಯ ಕಾಂಗ್ರೆಸ್ ನ್ನು ಸರಿಪಡಿಸಲು ಒಗ್ಗಟ್ಟಿನಿಂದ ಪಕ್ಷವನ್ನು ಕಟ್ಟುವ ಕೆಲಸ ಮೊದಲು ಆಗಬೇಕಾಗಿದೆ. ಪಕ್ಷದ ಹಿತಾಸಕ್ತಿ ಮುಖ್ಯ‌. ಸಾವದಾನ, ಸಮಾಧಾನ, ತಾಳ್ಮೆ

Read More
ಕರಾವಳಿರಾಜಕೀಯ

ಆರ್ಯಾಪು, ನಿಡ್ಪಳ್ಳಿ ಗ್ರಾ.ಪಂ ತೆರವಾದ ಸ್ಥಾನಕ್ಕೆ ಚುನಾವಣೆ: ಕಾಂಗ್ರೆಸ್, ಬಿಜೆಪಿ, ಪುತ್ತಿಲ ಪರಿವಾರ ಬೆಂಬಲಿತ ಸದಸ್ಯರ ಮಧ್ಯೆ ತ್ರಿಕೋನ ಸ್ಪರ್ಧೆ

ಪುತ್ತೂರು: ಆರ್ಯಾಪು ಹಾಗೂ ನಿಡ್ಪಳ್ಳಿ ಗ್ರಾ.ಪಂಗಳಲ್ಲಿ ಸದಸ್ಯರಿಬ್ಬರ ನಿಧನದಿಂದ ತೆರವಾದ ತಲಾ ಒಂದು ಸ್ಥಾನಕ್ಕೆ ಜು.23ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಪುತ್ತಿಲ ಪರಿವಾರ ಬೆಂಬಲಿತ

Read More
ಕರಾವಳಿರಾಜಕೀಯರಾಜ್ಯ

ಲೋಕಸಭಾ ಚುನಾವಣೆ: ಜೆಡಿಎಸ್ ಬೆಂಬಲ ಅಪೇಕ್ಷಿಸಿದ ಶೋಭಾ ಕರಂದ್ಲಾಜೆ

ರಾಜಕೀಯ ಭಿನ್ನಮತಗಳನ್ನ ದೂರವಿಟ್ಟು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಕೊಡಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ಸೂಚಿಸುವ ಬಗ್ಗೆ

Read More
ಕರಾವಳಿರಾಜಕೀಯ

ಬೆಳ್ತಂಗಡಿ ಕಾಂಗ್ರೆಸ್ ಸಭೆಯಲ್ಲಿ ಬಣಗಳ ಮಧ್ಯೆ ಮಾತಿನ ಚಕಮಕಿ: ಜಿಲ್ಲಾಧ್ಯಕ್ಷರ ಬದಲಾವಣೆಗೆ ಸಾಮಾಜಿಕ ಜಾಲ ತಾಣದಲ್ಲಿ ಆಗ್ರಹ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣಗಳ ಕುರಿತು ಪರಾಮರ್ಶೆ ಸಭೆ ಜು.14ರಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದ್ದು ಸಭೆಯಲ್ಲಿ ಎರಡು ಬಣಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ರಕ್ಷಿತ್ ಶಿವರಾಮ್ ಬಣ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ವಾಗ್ವಾದ ನಡೆದಿದೆ ಎಂದು ವರದಿಯಾಗಿದೆ. ಸತ್ಯ ಶೋಧನಾ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಭೆ ನಡೆಸುತ್ತಿದ್ದ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಗೌಡ, ಶೈಲೇಶ್ ಕುಮಾರ್, ಕೇಶವ್ ಪಿ, ಹರೀಶ್ ಕುಮಾರ್, ಮ್ಯಾಥ್ಯೂ, ರಾಜಶೇಖರ್ ಮತ್ತಿತರರು ಸಭೆಯಲ್ಲಿದ್ದರು. ಈ ವೇಳೆ ಎರಡು ಬಣಗಳ ಮಧ್ಯೆ ಮಾತಿನ ಚಕಮಕಿ ನಡೆದು ಪರಸ್ಪರ ವಾಗ್ವಾದ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರು.  ಸುಳ್ಯ ಹಾಗೂ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಗುಂಪುಗಾರಿಕೆ ಜೋರಾಗಿ ನಡೆಯುತ್ತಿದ್ದು ಸದ್ಯಕ್ಕೆ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ಈತನ್ಮಧ್ಯೆ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರನ್ನು ಬದಲಾಯಿಸಬೇಕೆಂದು ಸಾಮಾಜಿಕ ಜಾಲ ತಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಭಿನ್ನಮತ ಶಮನಗೊಳಿಸುವಲ್ಲಿ ವಿಫಲವಾಗಿರುವ ಜಿಲ್ಲಾಧ್ಯಕ್ಷರು ಪಕ್ಷ ಸಂಘಟಿಸುವಲ್ಲಿ ವಿಫಲರಾಗಿದ್ದಾರೆ, ಅಲ್ಲದೇ ಜಿಲ್ಲೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ, ಹಾಗಿರುವಾಗ ಜಿಲ್ಲಾಧ್ಯಕ್ಷರನ್ನು ಬದಲಾಯಿಸುವುದೇ ಸೂಕ್ತ ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Read More
ಕರಾವಳಿರಾಜಕೀಯ

ಸುಳ್ಯ ಕಾಂಗ್ರೆಸ್: ಮುಂದುವರಿದ ಕಚ್ಚಾಟ; ಕಡಬ ಕಾಂಗ್ರೆಸ್ ಸಭೆಯಲ್ಲಿ ಗದ್ದಲ, ಗೊಂದಲ, ತಳ್ಳಾಟ

ಸುಳ್ಯದಲ್ಲಿ ಕಾಂಗ್ರೆಸ್ ಆಂತರಿಕ ಕಚ್ಚಾಟ ಮತ್ತೆ ಮುಂದುವರಿದಿದೆ. ವಿಧಾನಸಭಾ ಚುನಾವಣೆಯ ಮೊದಲು ಪ್ರಾರಂಭಗೊಂಡಿದ್ದ ಭಿನ್ನಮತ, ಆಂತರಿಕ ಕಲಹ ಈಗ ಚುನಾವಣೆ ಮುಗಿದು ಫಲಿತಾಂಶ ಹೊರಬಂದ ಬಳಿಕ ವೂ

Read More
ಕರಾವಳಿರಾಜಕೀಯರಾಜ್ಯ

ಸರಕಾರಿ ಸ್ಥಳದಲ್ಲಿರುವ ಪೂಜಾಸ್ಥಳಗಳ ಸಕ್ರಮಕ್ಕೆ ವಿಶೇಷ ಕಾನೂನು ಜಾರಿಗೆ ಆಗ್ರಹ
ಹಿಂದುತ್ವದ ಮೇಲೆ ಅಧಿಕಾರ ಪಡೆದ ಬಿಜೆಪಿ ಮಾಡಿಲ್ಲ, ನಾವು ಮಾಡುತ್ತೇವೆ-ಶಾಸಕ ರೈ

ಪುತ್ತೂರು: ಸರಕಾರಿ ಜಾಗದಲ್ಲಿರುವ ಪೂಜಾ ಸ್ಥಳಗಳಾದ ದೇವಸ್ಥಾನ, ದೈವಸ್ಥಾನ, ಭಜನಾಮಂದಿರ, ಮಸೀದಿ ಮತ್ತು ಚರ್ಚುಗಳನ್ನು ಸಕ್ರಮ ಮಾಡುವ ಮೂಲಕ ಸರಕಾರ ಮತ್ತು ಪೂಜಾಸ್ಥಳದ ಹೆಸರಿನಲ್ಲಿ ಜಂಟಿ ಆರ್‌ಟಿಸಿ

Read More
ರಾಜಕೀಯರಾಜ್ಯ

ರಾಹುಲ್ ಗಾಂಧಿ ಪರ ಕಾಂಗ್ರೆಸ್ ಮೌನ ಪ್ರತಿಭಟನೆ

 ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಕೇಂದ್ರ ಸರ್ಕಾರ ಪಿತೂರಿ ರೂಪಿಸಿದೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇಂದು

Read More
error: Content is protected !!