ಹತ್ತೂರಲ್ಲೂ ಸುದ್ದಿಯಾಗುತ್ತಿರುವ ಐತಿಹಾಸಿಕ ಬೆಂಗಳೂರು ಕಂಬಳ
ಕರಾವಳಿಯ ಜನಪ್ರಿಯ ಜನಪದ ಕ್ರೀಡೆ ಕಂಬಳ ಇದೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿದ್ದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಿದ್ದತೆಗಳು ಭರದಿಂದ ಸಾಗುತ್ತಿದೆ. ನವೆಂಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದ್ದು ಕರಾವಳಿಯಿಂದ ನೂರೈವತ್ತಕ್ಕೂ ಹೆಚ್ಚು ಜೋಡಿ ಕಂಬಳ ಕೋಣಗಳು ಬೆಂಗಳೂರಿಗೆ ಪ್ರಯಾಣ ಬೆಳೆಸಲಿದೆ. ಇದೀಗ ಹತ್ತೂರಲ್ಲೂ ಬೆಂಗಳೂರು ಕಂಬಳದ್ದೇ ಸುದ್ದಿಯಾಗುತ್ತಿದ್ದು ಕರಾವಳಿಯ ಇತಿಹಾಸ ಪ್ರಸಿದ್ದ ಬೆಂಗಳೂರಿನಲ್ಲಿ ನಡೆಯುವ ಕಾರಣ ದೇಶ ವಿದೇಶಗಳ ಜನರು ವೀಕ್ಷಿಸುವ ಸಂಭ್ರಮದಲ್ಲಿದ್ದಾರೆ.
Read More